ಆನ್ ಲೈನ್ ವಂಚನೆ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 2.03 ಕೋಟಿಗೆ ಪಂಗನಾಮ…ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು…

ಆನ್ ಲೈನ್ ವಂಚನೆ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 2.03 ಕೋಟಿಗೆ ಪಂಗನಾಮ…ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಮಾ8,Tv10 ಕನ್ನಡ

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳಿಗೆ ಆನ್ ಲೈನ್ ಮೂಲಕ 2.03 ಕೋಟಿ ವಂಚನೆ ಮಾಡಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಮೊದಲ ಪ್ರಕರಣದಲ್ಲಿ ನಿವೇದಿತಾ ನಗರ ಬಡಾವಣೆಯ ನಿವಾಸಿ ನಟರಾಜ್ ಜರ್ಮಲೆ ರವರು 1,30,20,047/- ವಂಚನೆಗೆ ಒಳಗಾಗಿದ್ದರೆ ಮತ್ತೊಬ್ಬ ವಿಜಯನಗರ ನಿವಾಸಿ ಮಂದಪ್ಪ ಎಂಬುವರು 72,94,709/- ರೂ ಗಳನ್ನ ಕಳೆದುಕೊಂಡಿದ್ದಾರೆ.

ನಟರಾಜ್ ಜರ್ಮಲೆ ಅವರನ್ನ ಸ್ಕೈಪ್ ಮೂಲಕ ಪರಿಚಯಿಸಿಕೊಂಡ ವಂಚಕ ತಾನೊಬ್ಬ ಮುಂಬೈ ಪೊಲೀಸ್ ಅಧಿಕಾರಿ ಎಂದು ನಂಬಿಸಿದ್ದಾನೆ.ನಿಮ್ಮ ಆಧಾರ್ ಕಾರ್ಡ್ ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಕೆಯಾಗಿದೆ.ನಿಮ್ಮ ವಿರುದ್ದ ಎಫ್.ಐ.ಆರ್.ಆಗಿದೆ.ನಿಮ್ಮ ಮೇಲೆ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಿಮ್ಮ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆದರಿಸಿದ್ದಾನೆ.ನಿಮ್ಮ ಆಧಾರ್ ಕಾರ್ಡ್ ಕಾನೂನು ಬಾಹಿರ ಜಾಹಿರಾತು,ಮನಿ ಲಾಂಡರಿಂಗ್ ಗೆ ಬಳಕೆಯಾಗಿದೆ.ಅಲ್ಲದೆ ಮಿನಿಸ್ಟರ್ ಗಳು ಮತ್ತು ಸರ್ಕಾರಿ ನೌಕರರ ಜೊತೆ ಸೇರಿಕೊಂಡು ಭ್ರಷ್ಟಾಚಾರದಲ್ಲಿ ಭಾಗಿಯಾದಂತೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿದ್ದಾನೆ.ಇದರಿಂದ ವಿಚಲಿತರಾದ ನಟರಾಜ್ ಜರ್ಮಲೆ ವಿವಿದ ಹಂತಗಳಲ್ಲಿ ವಿವಿದ ಬ್ಯಾಂಕ್ ಮೂಲಕ 1,30,20,047/- ರೂಗಳನ್ನ ವರ್ಗಾಯಿಸಿದ್ದಾರೆ.ನಂತರ ತಾವು ಮೋಸ ಹೋಗಿರುವುದಾಗಿ ತಿಳಿದು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ವಿಜಯನಗರದ ಮಂದಪ್ಪ ರವರು ಇನ್ಸ್ಟಾಗ್ರಾಮ್ ಮೂಲಕ ಕೆಲವು ಕಂಪನಿಗಳ ಬಗ್ಗೆ ಮಾಹಿತಿ ಪಡೆದು ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ ಅವರ ಸಲಹೆಯಂತೆ ಸ್ಟಾಕ್ ಟ್ರೇಡಿಂಗ್ ಖಾತೆ ತೆರೆದಿದ್ದಾರೆ.ಸ್ಟಾಕ್ ಗಳನ್ನ ಖರೀದಿಸಿ ಮಾರಾಟ ಮಾಡಿದರೆ ಲಾಭ ನೀಡುವುದಾಗಿ ನಂಬಿಸಿ ವಿವಿದ ಹಂತಗಳಲ್ಲಿ 72,94,709/- ರೂ ಗಳನ್ಮ ಇನ್ವೆಸ್ಟ್ ಮಾಡಿಸಿದ್ದಾರೆ.ನಂತರ ಲಾಭವೂ ಇಲ್ಲ ಇನ್ವೆಸ್ಟ್ ಮಾಡಿದ ಹಣವೂ ಇಲ್ಲದಂತೆ ವಂಚನೆ ಮಾಡಿದ್ದಾರೆಂದು ಮಂದಪ್ಪ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *