ಲೋಕಸಭೆ ಚುನಾವಣೆ: ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆ ಸಿದ್ದತೆ…ಎನ್.ಆರ್.ಉಪವಿಭಾಗದಿಂದ ರೂಟ್ ಮಾರ್ಚ್…ಸಾರ್ವಜನಿಕರಿಗೆ ಅಭಯ…

ಮೈಸೂರು,ಮಾ8,Tv10 ಕನ್ನಡ

ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಹಿನ್ನಲೆ ಶಾಂತಿಯುತ ಮತದಾನಕ್ಕೆ ಮೈಸೂರು ಖಾಕಿ ಪಡೆ ಸಜ್ಜಾಗುತ್ತಿದೆ.ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸುವ ಮೂಲಕ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಎನ್.ಆರ್.ಉಪವಿಭಾಗದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥಸಂಚಲನ ನಡೆಸಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ನೇತೃತ್ವದಲ್ಲಿ ಪಥಸಂಚಲನ ನಡೆದಿದೆ. ಬೆಳಿಗ್ಗೆ 7 ಗಂಟೆಗೆ ರೂಟ್ ಡಿ.ವಿ.ಎನ್. ವೃತ್ತ,1008 ಗಣಪತಿ ವೃತ್ತ, ಗಾಯತ್ರಿ ರಾಮಾಂದಿರ ವೃತ್ತ, ಉಸ್ಮಾನಿಯ ಬ್ಲಾಕ್, ಗೌರ್ಮೆಂಟ್ ಹಾಸ್ಟೆಲ್, ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್, ಒಂದನೇ ಕ್ರಾಸ್ ಕೆಸರೆ ಎರಡನೇ ಹಂತ, ನಾಯ್ಡು ನಗರ ಮುಖ್ಯ ರಸ್ತೆ, ನಾಯ್ಡು ನಗರ ಬಸ್ ಸ್ಟ್ಯಾಂಡ್ ಸೇರಿದಂತೆ ಸೂಕ್ಷ್ಮ ಪ್ರದೇಶದಲ್ಲಿ ನೂರಾರು ಪೊಲೀಸರು ಸಂಚರಿಸಿ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಕಿಡಿಗೇಡಿಗಳಿಗೆ,ಸಮಾಜಘಾತುಕ ಶಕ್ತಿಗಳಿಗೆ ಎಚ್ಚರಿಕೆಯ ಗಂಟೆ ನೀಡಿದ್ದಾರೆ. ಇಂದಿನ ಪಥಸಂಚಲನದಲ್ಲಿ ಎನ್.ಆರ್.ಉಪವಿಭಾಗದ ಎಸಿಪಿ ಸುಧಾಕರ್,ಇನ್ಸ್ಪೆಕ್ಟರ್ ನಿರಂಜನ್ ಕುಮಾರ್ ಹಾಗೂ ಉಪವಿಭಾಗದ ಎಲ್ಲಾಠಾಣೆಯ ಇನ್ಸ್ಪೆಕ್ಟರ್ ಗಳು ಸಬ್ ಇನ್ಸ್ಪೆಕ್ಟರ್ ಗಳು ಮತ್ತು CISF ಪಡೆ ಭಾಗವಹಿಸಿ ನಿರ್ಭಯವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *