ಅಯಾಜ್ ಪಂಡು ಸಹೋದರ ಅಕ್ಮಲ್ ಕೊಲೆ ಪ್ರಕರಣ…ಕಾರ್ಪೊರೇಟರ್ ಬಷೀರ್,KMDC ಅಧ್ಯಕ್ಷ ಅಲ್ತಾಫ್ ಸೇರಿದಂತೆ 5 ಮಂದಿ ವಿರುದ್ದ FIR ದಾಖಲು…

  • Crime
  • March 10, 2024
  • No Comment
  • 667

ಮೈಸೂರು,ಮಾ10,Tv10 ಕನ್ನಡ

ಕಾರ್ಪೊರೇಟರ್ ಅಯಾಜ್ ಪಂಡು ಸಹೋದರ ಮೊಹಮದ್ ಅಕ್ಮಲ್ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ವಾರ್ಡ್ ನಂ 33 ರ ಕಾರ್ಪೊರೇಟರ್ ಬಷೀರ್ ಅಹಮದ್,KMDC ಅಧ್ಯಕ್ಷ ಅಲ್ತಾಫ್ ಸೇರಿದಂತೆ 5 ಮಂದಿ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.ಕಾರ್ಪೊರೇಟರ್ ಬಷೀರ್ ಅಹಮದ್,ಈತನ ಪುತ್ರ ಫೈಜಾನ್ ಅಹಮದ್,ಅಲ್ತಾಫ್ ಖಾನ್,ಪರ್ವೀಜ್ ಹಾಗೂ ಇಬ್ರಾಹಿಂ ವಿರುದ್ದ ಕೊಲೆ ಮಾಡಿಸಿರುತ್ತಾರೆ ಎಂದು ಆರೋಪಿಸಿ ಮೃತ ಅಕ್ಮಲ್ ಪತ್ನಿ ನಜಿಯಾ ಪ್ರಕರಣ ದಾಖಲಿಸಿದ್ದಾರೆ.

ಮಾರ್ಚ್ 8 ರಂದು ರಾತ್ರಿ 8.30 ರಲ್ಲಿ ರಾಜೀವ್ ನಗರದ ಆರ್ಯಬೇಕರಿ ಬಳಿ ಅಕ್ಮಲ್ ರನ್ನ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿತ್ತು.ಈ ಸಂಭಂಧ ಉದಯಗಿರಿ ಠಾಣೆ ಪೊಲೀಸರು 5 ಮಂದಿ ವಿರುದ್ದ ಕೊಲೆ ಆರೋಪ ಪ್ರಕರಣ ದಾಖಲಿಸಿದ್ದಾರೆ.

ಶಾಂತಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್ ತೆರುವುಗೊಳಿಸುವಂತೆ ಅಕ್ಮಲ್ ನಗರಪಾಲಿಕೆ ಆಯುಕ್ತರಿಗೆ ದೂರು ನೀಡಿದ್ದರು.ನಂತರ ರಾತ್ರಿ ಜೆಡ್ ಮಾರ್ಕ್ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ಅಲ್ತಾಫ್ ಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಈ ವೇಳೆ ಬಷೀರ್ ಹಾಗೂ ಅಲ್ತಾಫ್ ರವರು ಅಕ್ಮಲ್ ಗೆ ಅವಾಚ್ಯ ಶಭ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದರು.ಇದಕ್ಕೆ ಜಗ್ಗದ ಅಕ್ಮಲ್ ಬಷೀರ್ ಹಾಗೂ ಅಲ್ತಾಫ್ ವಿರುದ್ದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು.ನಂತರ ಅಲ್ತಾಫ್ ಗೆ ಕೊಲೆ ಬೆದರಿಕೆಗಳು ಬಂದಿತ್ತು.ಅಲ್ಲದೆ ಬಷೀರ್ ಹಾಗೂ ಅಲ್ತಾಫ್ ಬೆದರಿಕೆ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ಹೀಗಾಗಿ ತನ್ನ ಪತಿ ಅಕ್ಮಲ್ ರವರ ಕೊಲೆ ಹಿಂದೆ ಬಷೀರ್ ಅಹಮದ್,ಅಲ್ತಾಫ್ ಖಾನ್,ಪರ್ವೀಜ್,ಇಬ್ರಾಹಿಂ ಹಾಗೂ ಫೈಜಲ್ ಅಹಮದ್ ರವರ ಕೈವಾಡ ಇದೆ ಎಂದು ಆರೋಪಿಸಿ ನಜಿಯಾ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *