ವ್ಯಾಲೆಂಟೈನ್ಸ್ ಡೇ ದಿನವೇ ಅತ್ಯಾಚಾರಕ್ಕೆ ಒಳಗಾದ ಯುವತಿ ನೇಣು ಬಿಗಿದು ಆತ್ಮಹತ್ಯೆ…ಆರೋಪಿಯನ್ನ ಅರೆಸ್ಟ್ ಮಾಡದ ಪೊಲೀಸರ ವಿರುದ್ದ ಕುಟುಂಬಸ್ಥರ ಆಕ್ರೋಷ…

  • Crime
  • March 12, 2024
  • No Comment
  • 1777

ಹುಣಸೂರು,ಮಾ12,Tv10 ಕನ್ನಡ

ವ್ಯಾಲೆಂಟೈನ್ಸ್ ಡೇ ದಿನವೇ ಅತ್ಯಾಚರಕ್ಕೆ ಒಳಗಾದ ಯುವತಿಯೊಬ್ಬಳು ನ್ಯಾಯ ದೊರೆಯದ ಹಿನ್ನಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರು ತಾಲೂಕು ಶ್ಯಾನಭೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ರಂಜಿತಾ(19) ಮೃತ ದುರ್ದೈವಿ ಯುವತಿ.ಅದೇ ಗ್ರಾಮದ ವೇಣುಗೋಪಾಲ್ ಕೃಷ್ಣ(35) ಎಂಬಾತನ ಮೇಲೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.ಘಟನೆ ನಡೆದು ಸುಮಾರು ಒಂದು ತಿಂಗಳಾದರೂ ನ್ಯಾಯ ದೊರೆಯದ ಹಿನ್ನಲೆ ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಆರೋಪಿಯನ್ನ ಬಂಧಿಸುವಲ್ಲಿ ವಿಫಲರಾದ ಪೊಲೀಸರ ವಿರುದ್ದ ಕುಟುಂಬಸ್ಥರು ಆಕ್ರೋಷ ವ್ಯಕ್ತಪಡಿಸಿದ್ದಾರೆ.ಫೆಬ್ರವರಿ 14 ವ್ಯಾಲೆಂಟೈನ್ಸ್ ದಿನ ರಂಜಿತಾಳನ್ನ ವೇಣುಗೋಪಾಲ್ ತನ್ಮ ಬೊಲೆರೋ ವಾಹನದಲ್ಲಿ ಕರೆದೊಯ್ದಿದ್ದಾನೆ.ಮದುವೆ ಆಗುವುದಾಗಿ ನಂಬಿಸಿ ಬೊಲೆರೋ ವಾಹನದಲ್ಲೇ ಬಲತ್ಕಾರ ಮಾಡಿದ್ದಾನೆ.ನಂತರ ಕೇರಳಾಗೆ ಕರೆದೊಯ್ದು ಅತ್ಯಾಚಾರ ಮಾಡಿ ಮೈಸೂರಿಗೆ ಕರೆತಂದು ಕೈಗೆ ಒಂದು ಸಾವಿರ ನೀಡಿ ಮನೆಗೆ ಹೋಗುವಂತೆ ತಿಳಿಸಿದ್ದಾನೆ.ತನ್ನನ್ನ ಮದುವೆ ಆಗುವಂತೆ ರಂಜಿತಾ ಒತ್ತಾಯಿಸಿದ್ದಾಳೆ.ಇಲ್ಲದ ಕಾರಣಗಳನ್ನ ನೀಡಿ ವಾಪಸ್ ಕಳುಹಿಸಿದ್ದಾನೆ.ವೇಣುಗೋಪಾಲ್ ವಿವಾಹಿತನಾಗಿ ಎರಡು ಮಕ್ಕಳ ತಂದೆಯಾಗಿದ್ದರೂ 19 ವರ್ಷದ ರಂಜಿತಾಳನ್ನ ಮದುವೆ ಆಗುವುದಾಗಿ ನಂಬಿಸಿ ಬಲತ್ಕಾರ ಮಾಡಿ ವಂಚಿಸಿದ್ದಾನೆ.ರಂಜಿತಾಗೂ ಸಹ ಮದುವೆ ಫಿಕ್ಸ್ ಆಗಿತ್ತು ಎಂದು ಹೇಳಲಾಗಿದೆ.ವ್ಯಾಲೆಂಟೈನ್ಸ್ ದಿನವೇ ನಡೆದ ಅತ್ಯಾಚಾರ ಪ್ರಕರಣಕ್ಕೆ ಯುವತಿ ಬಲಿಯಾಗಿದ್ದಾಳೆ.ಸಧ್ಯ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *