ಸ್ನೇಹಿತೆಗೆ ಆಮಿಷವೊಡ್ಡಿ ಧೋಖಾ…21 ಲಕ್ಷ ನಗದು ಹಾಗೂ ಕಾರು ಜೊತೆ ವಂಚಕ ನಾಪತ್ತೆ…ಮೂವರ ವಿರುದ್ದ FIR ದಾಖಲು…

ಮೈಸೂರು,ಮಾ15,Tv10 ಕನ್ನಡ

ಕುಟುಂಬಸ್ಥರಿಗೆ ಸರ್ಕಾರಿ ಕೆಲಸ ಕೊಡಿಸುವುದು ಸೇರಿದಂತೆ ಹಲವು ಆಮಿಷವೊಡ್ಡಿದ ಯುವಕ ತನ್ನ ಸ್ನೇಹಿತೆಯನ್ನ ವಂಚಿಸಿದ ಪ್ರಕರಣವೊಂದು ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳವಾಡಿಯಲ್ಲಿ ಬೆಳಕಿಗೆ ಬಂದಿದೆ.ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ ಯುವತಿ ಸುಪ್ರಿಯಾ ಎಂಬುವರಿಗೆ ಬರೋಬರಿ ವಿವಿದ ಹಂತಗಳಲ್ಲಿ 21 ಲಕ್ಷ ನಗದು ಹಾಗೂ ಕಾರು ಪಡೆದು ವಂಚಿಸಿದ್ದಾನೆ.ಸಂದೀಪ್ ಕುಮಾರ್ ಹಾಗೂ ಈತನ ಸ್ನೇಹಿತರಾದ ಮನೋಜ್ ಕುಮಾರ್ ಮತ್ತು ಪುನೀತ್ ಎಂಬುವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಸುಮಾರು 8 ವರ್ಷಗಳ ಹಿಂದೆ ಸುಪ್ರಿಯಾಗೆ ಸಂದೀಪ್ ಕುಮಾರ್ ಪರಿಚಯವಾಗಿದ್ದಾನೆ.ಯಾವುದೋ ವ್ಯವಹಾರ ಮಾಡುವುದಾಗಿ ನಂಬಿಸಿ ಸುಪ್ರಿಯಾ ರಿಂದ 10 ಲಕ್ಷ ಪಡೆದಿದ್ದಾನೆ.ನಂತರ ಈತನ ಸ್ನೇಹಿತ ಮನೋಜ್ ಕುಮಾರ್ ಎಂಬಾತ ತನ್ನ ಮನೆಯಿಂದ ಚಿನ್ನದ ಒಡವೆಗಳನ್ನ ಕಳುವು ಮಾಡಿ ಸಂದೀಪ್ ಕುಮಾರ್ ಗೆ ಕೊಟ್ಟಿದ್ದಾನೆ.ಅದೇ ಒಡವೆಗಳನ್ನ ಸುಪ್ರಿಯಾ ಹೆಸರಲ್ಲಿ ಸಂದೀಪ್ ಕುಮಾರ್ ಆಟ್ಟಿಕಾ ಗೋಲ್ಡ್ ಕಂಪನಿಯಲ್ಲಿ ಗಿರವಿ ಇರಿಸಿದ್ದಾನೆ.ಮನೋಜ್ ಕುಮಾರ್ ಮನೆಯವರು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದಾಗ ಸುಪ್ರಿಯಾ ಬಳಿಯಿಂದ ಸಂದೀಪ್ ಕುಮಾರ್ 8.5 ಲಕ್ಷ ಪಡೆದು ಸೆಟಲ್ ಮಾಡಿದ್ದಾನೆ.ಈ ಮಧ್ಯೆ ಸುಪ್ರಿಯಾ ಮನೆಯವರಿಗೆ ಸರ್ಕಾರಿ ಕೆಲಸ ಕೊಡಿಸುವ ಆಮಿಷ ತೋರಿಸಿ 2.5 ಲಕ್ಷ ಪೀಕಿದ್ದಾನೆ.ಇಷ್ಟಕ್ಕೂ ಸಾಲದೆಂಬಂತೆ ಸುಪ್ರಿಯಾ ಖರೀದಿಸಿದ್ದ ಕಾರು ಪಡೆದು ನಾಪತ್ತೆಯಾಗಿದ್ದಾನೆ.ಹಣ ಹಾಗೂ ಕಾರು ಹಿಂದಿರುಗಿಸುವಂತೆ ಒತ್ತಾಯಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.ಈ ವಿಚಾರ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ.ಇವೆಲ್ಲಾ ವಂಚನೆಗೆ ಪುನೀತ್ ಎಂಬಾತ ಸಹಕರಿಸಿದ್ದಾನೆಂದು ಆರೋಪಿಸಿರುವ ಸುಪ್ರಿಯಾ ಮೂವರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *