ಸ್ನೇಹಿತೆಗೆ ಆಮಿಷವೊಡ್ಡಿ ಧೋಖಾ…21 ಲಕ್ಷ ನಗದು ಹಾಗೂ ಕಾರು ಜೊತೆ ವಂಚಕ ನಾಪತ್ತೆ…ಮೂವರ ವಿರುದ್ದ FIR ದಾಖಲು…

ಮೈಸೂರು,ಮಾ15,Tv10 ಕನ್ನಡ

ಕುಟುಂಬಸ್ಥರಿಗೆ ಸರ್ಕಾರಿ ಕೆಲಸ ಕೊಡಿಸುವುದು ಸೇರಿದಂತೆ ಹಲವು ಆಮಿಷವೊಡ್ಡಿದ ಯುವಕ ತನ್ನ ಸ್ನೇಹಿತೆಯನ್ನ ವಂಚಿಸಿದ ಪ್ರಕರಣವೊಂದು ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳವಾಡಿಯಲ್ಲಿ ಬೆಳಕಿಗೆ ಬಂದಿದೆ.ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ ಯುವತಿ ಸುಪ್ರಿಯಾ ಎಂಬುವರಿಗೆ ಬರೋಬರಿ ವಿವಿದ ಹಂತಗಳಲ್ಲಿ 21 ಲಕ್ಷ ನಗದು ಹಾಗೂ ಕಾರು ಪಡೆದು ವಂಚಿಸಿದ್ದಾನೆ.ಸಂದೀಪ್ ಕುಮಾರ್ ಹಾಗೂ ಈತನ ಸ್ನೇಹಿತರಾದ ಮನೋಜ್ ಕುಮಾರ್ ಮತ್ತು ಪುನೀತ್ ಎಂಬುವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಸುಮಾರು 8 ವರ್ಷಗಳ ಹಿಂದೆ ಸುಪ್ರಿಯಾಗೆ ಸಂದೀಪ್ ಕುಮಾರ್ ಪರಿಚಯವಾಗಿದ್ದಾನೆ.ಯಾವುದೋ ವ್ಯವಹಾರ ಮಾಡುವುದಾಗಿ ನಂಬಿಸಿ ಸುಪ್ರಿಯಾ ರಿಂದ 10 ಲಕ್ಷ ಪಡೆದಿದ್ದಾನೆ.ನಂತರ ಈತನ ಸ್ನೇಹಿತ ಮನೋಜ್ ಕುಮಾರ್ ಎಂಬಾತ ತನ್ನ ಮನೆಯಿಂದ ಚಿನ್ನದ ಒಡವೆಗಳನ್ನ ಕಳುವು ಮಾಡಿ ಸಂದೀಪ್ ಕುಮಾರ್ ಗೆ ಕೊಟ್ಟಿದ್ದಾನೆ.ಅದೇ ಒಡವೆಗಳನ್ನ ಸುಪ್ರಿಯಾ ಹೆಸರಲ್ಲಿ ಸಂದೀಪ್ ಕುಮಾರ್ ಆಟ್ಟಿಕಾ ಗೋಲ್ಡ್ ಕಂಪನಿಯಲ್ಲಿ ಗಿರವಿ ಇರಿಸಿದ್ದಾನೆ.ಮನೋಜ್ ಕುಮಾರ್ ಮನೆಯವರು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದಾಗ ಸುಪ್ರಿಯಾ ಬಳಿಯಿಂದ ಸಂದೀಪ್ ಕುಮಾರ್ 8.5 ಲಕ್ಷ ಪಡೆದು ಸೆಟಲ್ ಮಾಡಿದ್ದಾನೆ.ಈ ಮಧ್ಯೆ ಸುಪ್ರಿಯಾ ಮನೆಯವರಿಗೆ ಸರ್ಕಾರಿ ಕೆಲಸ ಕೊಡಿಸುವ ಆಮಿಷ ತೋರಿಸಿ 2.5 ಲಕ್ಷ ಪೀಕಿದ್ದಾನೆ.ಇಷ್ಟಕ್ಕೂ ಸಾಲದೆಂಬಂತೆ ಸುಪ್ರಿಯಾ ಖರೀದಿಸಿದ್ದ ಕಾರು ಪಡೆದು ನಾಪತ್ತೆಯಾಗಿದ್ದಾನೆ.ಹಣ ಹಾಗೂ ಕಾರು ಹಿಂದಿರುಗಿಸುವಂತೆ ಒತ್ತಾಯಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.ಈ ವಿಚಾರ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ.ಇವೆಲ್ಲಾ ವಂಚನೆಗೆ ಪುನೀತ್ ಎಂಬಾತ ಸಹಕರಿಸಿದ್ದಾನೆಂದು ಆರೋಪಿಸಿರುವ ಸುಪ್ರಿಯಾ ಮೂವರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *