ಜೈನತೀರ್ಥಂಕರ ವಿಗ್ರಹಗಳನ್ನ ಮಾಡಿಕೊಡುವುದಾಗಿ ವಂಚನೆ…ಜಬಲ್ ಪುರದ ಮಾರ್ಬಲ್ ವ್ಯಾಪಾರಿ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ15,Tv10 ಕನ್ನಡ

ಜೈನತೀರ್ಥಂಕರ ವಿಗ್ರಹಗಳನ್ನ ಮಾಡಿಕೊಡುವುದಾಗಿ ನಂಬಿಸಿ ಮಧ್ಯಪ್ರದೇಶ ಜಬಲ್ ಪುರದ ಮಾರ್ಬಲ್ ವ್ಯಾಪಾರಿಯೊಬ್ಬ ಮೈಸೂರಿನ ಶಾಂತಿನಾಥ ಸೇವಾ ಸಮಿತಿ ಪದಾಧಿಕಾರಿಗಳನ್ನ ವಂಚಿಸಿದ್ದಾನೆ.ವ್ಯಾಪಾರಿಯ ಮಾತುಗಳನ್ನ ನಂಬಿ ಪದಾಧಿಕಾರಿಗಳು 3.31 ಲಕ್ಷ ಹಣ ಕೊಟ್ಟು ವಂಚನೆಗೆ ಒಳಗಾಗಿದ್ದಾರೆ.ಈ ಸಂಭಂಧ ಕೆ.ಆರ್.ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಮಧ್ಯಪ್ರದೇಶದ ಜಬಲ್ ಪುರದ ಮಹಾವೀರ್ ಮಾರ್ಬಲ್ ಮತ್ತು ಮೂರ್ತಿ ಆರ್ಟ್ ನ ಮಾಲೀಕ ವಿಕಾಸ್ ಜೈನ್ ಎಂಬಾತನ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಶಾಂತಿನಾಥ ಸೇವಾ ಸಮಿತಿಯವರು ಸಯ್ಯಾಜಿ ರಾವ್ ರಸ್ತೆಯಲ್ಲಿರುವ ಕೋಟಿ ಶ್ರೀಶಾಂತಿನಾಥ ಬಸದಿಯಲ್ಲಿ ಜೈನ ತೀರ್ಥಂಕರಗಳನ್ನ ಪ್ರತಿಷ್ಠಾಪಿಸಲು ನಿರ್ಧರಿಸಿದ್ದಾರೆ.ಇತ್ತೀಚೆಗರ ನಡೆದ ಚಾತುರ್ಮಾಸ ಪೂಜೆ ವೇಳೆ ಜೈನ ಮುನಿಗಳ ಕಾರ್ಯಕ್ರಮಕ್ಕ ಜಬಲ್ ಪುರದಿಂದ ಬಂದಿದ್ದ ವಿಕಾಸ್ ಜೈನ್ ಶಾಂತಿನಾಥ ಸೇವಾ ಸಮಿತಿ ಪದಾಧಿಕಾರಿಗಳನ್ನ ಭೇಟಿಯಾಗಿ ತಾನು ಮಾರ್ಬಲ್ ವ್ಯಾಪಾರಿ ವಿಗ್ರಹಗಳನ್ನ ಕೆತ್ತನೆ ಮಾಡಿಕೊಡುವುದಾಗಿ ನಂಬಿಸಿದ್ದಾನೆ.ಈತನ ಮಾತುಗಳನ್ನ ನಂಬಿದ ಸಮಿತಿ ಸದಸ್ಯರು 8 ವಿಗ್ರಹಗಳು,ಫ್ರೇಂಗಳು ಹಾಗೂ ಮಾನಸ್ಥಂಭದ ಪೀಠದ ಕಲ್ಲುಗಳನ್ನ 8,61,000/- ರೂ ವೆಚ್ಚದಲ್ಲಿ ಮಾಡಿಕೊಡುವುದಾಗಿ ನಂಬಿಸಿದ್ದಾನೆ.ಮುಂಗಡವಾಗಿ ವಿಕಾಸ್ ಜೈನ್ ಗೆ 1,11,000/- ಪಾವತಿಸಿದ್ದಾರೆ.ಕೆಲವು ದಿನಗಳ ನಂತರ ವಿಗ್ರಹಗಳು ತಯಾರಾಗುತ್ತಿರುವ ಫೋಟೋಗಳನ್ನ ತೋರಿಸಿ 2,20,000/- ರೂ ಪಡೆದಿದ್ದಾನೆ.ನಂತರ ಸಮಿತಿಯವರ ಕೈಗೆ ಸಿಗದೆ ಕಣ್ಣಾಮುಚ್ಚಾಲೆ ಆಟವಾಡಿದ್ದಾನೆ.ಸ್ವಿಚ್ ಮಾಡುವುದು,ಸುಳ್ಳು ಕಾರಣಗಳನ್ನ ನೀಡಿ ವಿಗ್ರಹಗಳನ್ನ ನೀಡದೆ ವಂಚಿಸಿದ್ದಾನೆ.ಈ ಬಗ್ಗೆ ಒತ್ತಡ ಹೇರಿದಾಗ ಬೇಜವಾಬ್ದಾರಿಯಿಂದ ವರ್ತಿಸಿ ಹಣ ವಂಚಿಸಿದ್ದಾನೆ.ಸಧ್ಯ ವಿಕಾಸ್ ಜೈನ್ ವಿರುದ್ದ ಶಾಂತಿನಾಥ ಸೇವಾ ಸಮಿತಿಯ ಖಜಾಂಚಿ ಮಹೇಶ್ ಪ್ರಸಾದ್ ರವರು ಕೆ.ಆರ್.ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *