ಜೈನತೀರ್ಥಂಕರ ವಿಗ್ರಹಗಳನ್ನ ಮಾಡಿಕೊಡುವುದಾಗಿ ವಂಚನೆ…ಜಬಲ್ ಪುರದ ಮಾರ್ಬಲ್ ವ್ಯಾಪಾರಿ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ15,Tv10 ಕನ್ನಡ

ಜೈನತೀರ್ಥಂಕರ ವಿಗ್ರಹಗಳನ್ನ ಮಾಡಿಕೊಡುವುದಾಗಿ ನಂಬಿಸಿ ಮಧ್ಯಪ್ರದೇಶ ಜಬಲ್ ಪುರದ ಮಾರ್ಬಲ್ ವ್ಯಾಪಾರಿಯೊಬ್ಬ ಮೈಸೂರಿನ ಶಾಂತಿನಾಥ ಸೇವಾ ಸಮಿತಿ ಪದಾಧಿಕಾರಿಗಳನ್ನ ವಂಚಿಸಿದ್ದಾನೆ.ವ್ಯಾಪಾರಿಯ ಮಾತುಗಳನ್ನ ನಂಬಿ ಪದಾಧಿಕಾರಿಗಳು 3.31 ಲಕ್ಷ ಹಣ ಕೊಟ್ಟು ವಂಚನೆಗೆ ಒಳಗಾಗಿದ್ದಾರೆ.ಈ ಸಂಭಂಧ ಕೆ.ಆರ್.ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಮಧ್ಯಪ್ರದೇಶದ ಜಬಲ್ ಪುರದ ಮಹಾವೀರ್ ಮಾರ್ಬಲ್ ಮತ್ತು ಮೂರ್ತಿ ಆರ್ಟ್ ನ ಮಾಲೀಕ ವಿಕಾಸ್ ಜೈನ್ ಎಂಬಾತನ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಶಾಂತಿನಾಥ ಸೇವಾ ಸಮಿತಿಯವರು ಸಯ್ಯಾಜಿ ರಾವ್ ರಸ್ತೆಯಲ್ಲಿರುವ ಕೋಟಿ ಶ್ರೀಶಾಂತಿನಾಥ ಬಸದಿಯಲ್ಲಿ ಜೈನ ತೀರ್ಥಂಕರಗಳನ್ನ ಪ್ರತಿಷ್ಠಾಪಿಸಲು ನಿರ್ಧರಿಸಿದ್ದಾರೆ.ಇತ್ತೀಚೆಗರ ನಡೆದ ಚಾತುರ್ಮಾಸ ಪೂಜೆ ವೇಳೆ ಜೈನ ಮುನಿಗಳ ಕಾರ್ಯಕ್ರಮಕ್ಕ ಜಬಲ್ ಪುರದಿಂದ ಬಂದಿದ್ದ ವಿಕಾಸ್ ಜೈನ್ ಶಾಂತಿನಾಥ ಸೇವಾ ಸಮಿತಿ ಪದಾಧಿಕಾರಿಗಳನ್ನ ಭೇಟಿಯಾಗಿ ತಾನು ಮಾರ್ಬಲ್ ವ್ಯಾಪಾರಿ ವಿಗ್ರಹಗಳನ್ನ ಕೆತ್ತನೆ ಮಾಡಿಕೊಡುವುದಾಗಿ ನಂಬಿಸಿದ್ದಾನೆ.ಈತನ ಮಾತುಗಳನ್ನ ನಂಬಿದ ಸಮಿತಿ ಸದಸ್ಯರು 8 ವಿಗ್ರಹಗಳು,ಫ್ರೇಂಗಳು ಹಾಗೂ ಮಾನಸ್ಥಂಭದ ಪೀಠದ ಕಲ್ಲುಗಳನ್ನ 8,61,000/- ರೂ ವೆಚ್ಚದಲ್ಲಿ ಮಾಡಿಕೊಡುವುದಾಗಿ ನಂಬಿಸಿದ್ದಾನೆ.ಮುಂಗಡವಾಗಿ ವಿಕಾಸ್ ಜೈನ್ ಗೆ 1,11,000/- ಪಾವತಿಸಿದ್ದಾರೆ.ಕೆಲವು ದಿನಗಳ ನಂತರ ವಿಗ್ರಹಗಳು ತಯಾರಾಗುತ್ತಿರುವ ಫೋಟೋಗಳನ್ನ ತೋರಿಸಿ 2,20,000/- ರೂ ಪಡೆದಿದ್ದಾನೆ.ನಂತರ ಸಮಿತಿಯವರ ಕೈಗೆ ಸಿಗದೆ ಕಣ್ಣಾಮುಚ್ಚಾಲೆ ಆಟವಾಡಿದ್ದಾನೆ.ಸ್ವಿಚ್ ಮಾಡುವುದು,ಸುಳ್ಳು ಕಾರಣಗಳನ್ನ ನೀಡಿ ವಿಗ್ರಹಗಳನ್ನ ನೀಡದೆ ವಂಚಿಸಿದ್ದಾನೆ.ಈ ಬಗ್ಗೆ ಒತ್ತಡ ಹೇರಿದಾಗ ಬೇಜವಾಬ್ದಾರಿಯಿಂದ ವರ್ತಿಸಿ ಹಣ ವಂಚಿಸಿದ್ದಾನೆ.ಸಧ್ಯ ವಿಕಾಸ್ ಜೈನ್ ವಿರುದ್ದ ಶಾಂತಿನಾಥ ಸೇವಾ ಸಮಿತಿಯ ಖಜಾಂಚಿ ಮಹೇಶ್ ಪ್ರಸಾದ್ ರವರು ಕೆ.ಆರ್.ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *