ನೀರಿನಲ್ಲಿ ವಿಷ ಬೆರೆಸಿ ಅಣ್ಣನ ಮಗನ ಕೊಲೆ ಯತ್ನ ಆರೋಪ…ಚಿಕ್ಕಪ್ಪ ಸೇರಿದಂತೆ ಐವರ ವಿರುದ್ದ FIR ದಾಖಲು…

ನೀರಿನಲ್ಲಿ ವಿಷ ಬೆರೆಸಿ ಅಣ್ಣನ ಮಗನ ಕೊಲೆ ಯತ್ನ ಆರೋಪ…ಚಿಕ್ಕಪ್ಪ ಸೇರಿದಂತೆ ಐವರ ವಿರುದ್ದ FIR ದಾಖಲು…

ಮೈಸೂರು,ಮಾ16,Tv10 ಕನ್ನಡ

ಸಾಲದ ಹಣ ಕೇಳಲು ಮನೆಗೆ ಬಂದ ಅಣ್ಣನ ಮಗನನ್ನ ಚಿಕ್ಕಪ್ಪ ಹಾಗೂ ಕುಟುಂಬಸ್ಥರು ನೀರಿನಲ್ಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.ಈ ಸಂಭಂಧ ಚಿಕ್ಕಪ್ಪ ಸೇರಿತೆ 5 ಮಂದಿ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಆರೋಪ ಪ್ರಕರಣ ದಾಖಲಾಗಿದೆ.ಬೆಳವಾಡಿಯ ಪ್ರಭಾಕರ್ ಎಂಬುವರನ್ನ ಕೊಲೆಗೆ ಯತ್ನಿಸಿದ ಆರೋಪದಡಿ ಚಿಕ್ಕಪ್ಪ ಶ್ರೀನಿವಾಸ,ಪತ್ನಿ ಗೀತಾ,ಮಕ್ಕಳಾದ ಸಂಜು,ರಂಜು ಹಾಗೂ ಗೀತಾ ತಂದೆ ಕೃಷ್ಣಪ್ಪ ಎಂಬುವರ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಪ್ರಭಾಕರ್ ರವರು ತಮ್ಮ ಚಿಕ್ಕಪ್ಪ ಶ್ರೀನಿವಾಸ್ ಗೆ 16 ಲಕ್ಷ ಸಾಲ ನೀಡಿದ್ದಾರು.ಸಾಲ ವಾಪಸಾತಿಗಾಗಿ 13 ಲಕ್ಷದ ಚೆಕ್ ನೀಡಿದ್ದರು.ನಗದೀಕರಿಸಲು ಬ್ಯಾಂಕ್ ಗೆ ಚೆಕ್ ಪ್ರೆಸೆಂಟ್ ಮಾಡಿದಾಗ ಬೌನ್ಸ್ ಆಗಿದೆ.ಈ ಬಗ್ಗೆ ಫೋನ್ ಮಾಡಿದಾಗ ಮನೆಗೆ ಬರುವಂತೆ ತಿಳಿಸಿದ್ದಾರೆ.ಮನೆಗೆ ಬಂದ ಪ್ರಭಾಕರ್ ಗೆ ಹಣ ನೀಡುವುದಿಲ್ಲವೆಂದು ಹೇಳಿದ್ದಾರೆ.ಇದೇ ವೇಳೆ ಪ್ರಭಾಕರ್ ಕುಡಿಯಲು ನೀರು ಕೇಳಿದ್ದಾರೆ.ಗೀತಾ ರವರು ಅಡುಗೆ ಮನೆಯಿಂದ ನೀರು ತಂದು ಕೊಟ್ಟಿದ್ದಾರೆ.ನೀರು ಕುಡಿಯುತ್ತಿದ್ದಂತೆಯೇ ಪ್ರಭಾಕರ್ ಗೆ ತಲೆ ಸುತ್ತಿದ್ದಂತಾಗಿದೆ.ಈ ಸಮಯದಲ್ಲಿ ಶ್ರೀನಿವಾಸ್,ಸಂಜು,ರಂಜು ಹಾಗೂ ಕೃಷ್ಣಪ್ಪ ರವರು ಹಲ್ಲೆ ನಡೆಸಿದ್ದಾರೆ.ಐವರ ಕಪಿಮುಷ್ಠಿಯಿಂದ ಬಿಡಿಸಿಕೊಂಡು ಮನೆಯಿಂದ ಹೊರಬಂದ ಪ್ರಭಾಕರ್ ಸ್ವಲ್ಪದೂರ ತೆರಳಿದ ನಂತರ ಪ್ರಜ್ಞೆತಪ್ಪಿ ಬಿದ್ದಿದ್ದಾರೆ.ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಾದ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ವಿಜಯನಗರ ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸ್,ಗೀತಾ,ಸಂಜು,ರಂಜು,ಕೃಷ್ಣಪ್ಪ ವಿರುದ್ದ ಕೊಲೆ ಯತ್ನ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *