ಬ್ಯಾಂಕ್ ಆಫ್ ಬರೋಡಾ ಗೆ 49.99 ಲಕ್ಷ ವಂಚನೆ…ಚಾಲಾಕಿ ದಂಪತಿ ವಿರುದ್ದ FIR ದಾಖಲು…

ಮೈಸೂರು,ಮಾ17,Tv10 ಕನ್ನಡ

ಒಂದೇ ಆಸ್ತಿಯನ್ನ ಎರಡು ಬ್ಯಾಂಕ್ ಗಳಲ್ಲಿ ಅಡಮಾನವಿಟ್ಟ ಚಾಲಾಕಿ ದಂಪತಿ ವಿರುದ್ದ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಸರಸ್ವತಿಪುರಂ ಬ್ರಾಂಚ್ ನಲ್ಲಿ 49.99 ಲಕ್ಷ ಸಾಲ ಪಡೆದು ಅದೇ ದಾಖಲಾತಿಯನ್ನ ತಿದ್ದುಪಡಿ ಮಾಡಿ ಬೆಂಗಳೂರಿನ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಲ್ಲೂ ಸಾಲ ಪಡೆದು ವಂಚಿಸಿರುವ ಆರೋಪದಡಿ ಪ್ರಕರಣ ದಾಖಲಾಗಿದೆ.ಮೈಸೂರಿನ ಜೆಪಿ ನಗರ ನಿವಾಸಿಗಳಾದ ನಿರಂಜನ್ ಹಾಗೂ ನಂದಿನಿ ದಂಪತಿ ವಿರುದ್ದ ಚೀಟಿಂಗ್ ಪ್ರಕರಣ ದಾಖಲಾಗಿದೆ.

ನಿರಂಜನ್ ಹಾಗೂ ನಂದಿನಿ ರವರಿಗೆ ಸೇರಿದ ಆಸ್ತಿಯ ಮೂಲ ದಾಖಲಾತಿಗಳನ್ನ ಸರಸ್ವತಿಪುರಂ ಬ್ರಾಂಚ್ ನ ಬ್ಯಾಂಕ್ ಆಫ್ ಬರೋಡದಲ್ಲಿ ಅಡಮಾನವಿಟ್ಟು 2016 ರಲ್ಲಿ 49.99 ಲಕ್ಷ ಸಾಲ ಪಡೆದಿದ್ದಾರೆ.ಸಾಲ ಪಡೆದು 8 ವರ್ಷಗಳಾದರೂ ಹಣ ಮರುಪಾವತಿಸಿಲ್ಲ.ಸಾಲದ ಹಣ ಬಡ್ಡಿ ಸೇರಿ 79,71,306/- ರೂ ಪಾವತಿಸಬೇಕಿರುತ್ತದೆ.ಈ ಮಧ್ಯೆ ಬೆಂಗಳೂರಿನ ಬನಶಂಕರಿ ಬಡಾವಣೆಯಲ್ಲಿರುವ ಸುರಭಿ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಲ್ಲೂ ಸಹ ಇದೇ ದಾಖಲಾತಿಗಳನ್ನ ತಿದ್ದುಪಡಿ ಮಾಡಿ ಸಾಲ ಪಡೆದಿರುವುದು ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರ ಗಮನಕ್ಕೆ ಬಂದಿದೆ.ಅಲ್ಲದೆ ಈ ಬಗ್ಗೆ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನವರೂ ಸಹ ಪತ್ರ ವ್ಯವಹಾರ ಮಾಡಿ ದಂಪತಿಯ ವಂಚನೆಯನ್ನ ಬಯಲಿಗೆ ತಂದಿದ್ದಾರೆ.ಈ ಸಂಭಂಧ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರಾದ ಎಂ.ಯೋಗೇಶ್ ರವರು ಕಿಲಾಡಿ ದಂಪತಿ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *