ಬ್ಯಾಂಕ್ ಆಫ್ ಬರೋಡಾ ಗೆ 49.99 ಲಕ್ಷ ವಂಚನೆ…ಚಾಲಾಕಿ ದಂಪತಿ ವಿರುದ್ದ FIR ದಾಖಲು…

ಬ್ಯಾಂಕ್ ಆಫ್ ಬರೋಡಾ ಗೆ 49.99 ಲಕ್ಷ ವಂಚನೆ…ಚಾಲಾಕಿ ದಂಪತಿ ವಿರುದ್ದ FIR ದಾಖಲು…

ಮೈಸೂರು,ಮಾ17,Tv10 ಕನ್ನಡ

ಒಂದೇ ಆಸ್ತಿಯನ್ನ ಎರಡು ಬ್ಯಾಂಕ್ ಗಳಲ್ಲಿ ಅಡಮಾನವಿಟ್ಟ ಚಾಲಾಕಿ ದಂಪತಿ ವಿರುದ್ದ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಸರಸ್ವತಿಪುರಂ ಬ್ರಾಂಚ್ ನಲ್ಲಿ 49.99 ಲಕ್ಷ ಸಾಲ ಪಡೆದು ಅದೇ ದಾಖಲಾತಿಯನ್ನ ತಿದ್ದುಪಡಿ ಮಾಡಿ ಬೆಂಗಳೂರಿನ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಲ್ಲೂ ಸಾಲ ಪಡೆದು ವಂಚಿಸಿರುವ ಆರೋಪದಡಿ ಪ್ರಕರಣ ದಾಖಲಾಗಿದೆ.ಮೈಸೂರಿನ ಜೆಪಿ ನಗರ ನಿವಾಸಿಗಳಾದ ನಿರಂಜನ್ ಹಾಗೂ ನಂದಿನಿ ದಂಪತಿ ವಿರುದ್ದ ಚೀಟಿಂಗ್ ಪ್ರಕರಣ ದಾಖಲಾಗಿದೆ.

ನಿರಂಜನ್ ಹಾಗೂ ನಂದಿನಿ ರವರಿಗೆ ಸೇರಿದ ಆಸ್ತಿಯ ಮೂಲ ದಾಖಲಾತಿಗಳನ್ನ ಸರಸ್ವತಿಪುರಂ ಬ್ರಾಂಚ್ ನ ಬ್ಯಾಂಕ್ ಆಫ್ ಬರೋಡದಲ್ಲಿ ಅಡಮಾನವಿಟ್ಟು 2016 ರಲ್ಲಿ 49.99 ಲಕ್ಷ ಸಾಲ ಪಡೆದಿದ್ದಾರೆ.ಸಾಲ ಪಡೆದು 8 ವರ್ಷಗಳಾದರೂ ಹಣ ಮರುಪಾವತಿಸಿಲ್ಲ.ಸಾಲದ ಹಣ ಬಡ್ಡಿ ಸೇರಿ 79,71,306/- ರೂ ಪಾವತಿಸಬೇಕಿರುತ್ತದೆ.ಈ ಮಧ್ಯೆ ಬೆಂಗಳೂರಿನ ಬನಶಂಕರಿ ಬಡಾವಣೆಯಲ್ಲಿರುವ ಸುರಭಿ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಲ್ಲೂ ಸಹ ಇದೇ ದಾಖಲಾತಿಗಳನ್ನ ತಿದ್ದುಪಡಿ ಮಾಡಿ ಸಾಲ ಪಡೆದಿರುವುದು ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರ ಗಮನಕ್ಕೆ ಬಂದಿದೆ.ಅಲ್ಲದೆ ಈ ಬಗ್ಗೆ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನವರೂ ಸಹ ಪತ್ರ ವ್ಯವಹಾರ ಮಾಡಿ ದಂಪತಿಯ ವಂಚನೆಯನ್ನ ಬಯಲಿಗೆ ತಂದಿದ್ದಾರೆ.ಈ ಸಂಭಂಧ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರಾದ ಎಂ.ಯೋಗೇಶ್ ರವರು ಕಿಲಾಡಿ ದಂಪತಿ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ…

ಪಿರಿಯಾಪಟ್ಟಣ,ಮೇ16,Tv10 ಕನ್ನಡ ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್…
ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…
ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…

Leave a Reply

Your email address will not be published. Required fields are marked *