ಯುಟ್ಯೂಬ್ ಚಾನೆಲ್ ಪಾರ್ಟ್ನರ್ ಪತ್ನಿಗೆ ಲೈಂಗಿಕ ಕಿರುಕುಳ ಆರೋಪ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಮಾ18,Tv10 ಕನ್ನಡ

ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ವ್ಯಕ್ತಿ ತನ್ನ ಪಾರ್ಟ್ನರ್ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ವಿನಯ್,ಈತನ ಪತ್ನಿ ಮಮತ ,ಕಾರಿನ ಚಾಲಕ ರಾಘು ಹಾಗೂ ಚೆಂಗಪ್ಪ ಎಂಬುವರ ಮೇಲೆ ನೊಂದ ಮಹಿಳೆ ಎಫ್.ಐ.ಆರ್.ದಾಖಲು ಮಾಡಿದ್ದಾರೆ.

ನೊಂದ ಮಹಿಳೆಯ ಪತಿ ಚಂದು ಹಾಗೂ ವಿನಯ್ ಇಬ್ಬರೂ ಸೇರಿ ಉಖ ಖಿಗಿ ಕನ್ನಡ ಎಂಬ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ.ಚಾನೆಲ್ ಕೆಲಸ ಹೆಚ್ಚಾಗಿರುತ್ತದೆ ಎಂದು ಕಾರಣ ನೀಡಿ ವಿನಯ್ ತನ್ನ ಪಾರ್ಟ್ನರ್ ಚಂದು ಹಾಗೂ ಪತ್ನಿಗೆ ತಾನಿದ್ದ ಬೋಗಾದಿ ಮನೆಯಲ್ಲೇ ವಾಸವಿರುವಂತೆ ವ್ಯವಸ್ಥೆ ಮಾಡಿದ್ದಾನೆ.ಕೆಲವು ದಿನಗಳ ಹಿಂದೆ ವಿನಯ್ ಮಧ್ಯರಾತ್ರಿ ಚಂದು ಮನೆಗೆ ಬಂದು ಪತ್ನಿಯನ್ನ ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ.ಈ ವೇಳೆ ಸ್ಥಳಕ್ಕೆ ಬಂದ ಚಂದು ಪತ್ನಿಯ ರಕ್ಷಣೆಗೆ ಯತ್ನಿಸಿದ್ದಾರೆ. ವಿನಯ್ ಗೆ ಕಾರಿನ ಚಾಲಕ ರಾಘು ಜೊತೆ ಸೇರಿಕೊಂಡು ಚಂದು ಮೇಲೆ ಹಲ್ಲೆ ನಡೆಸಿದ್ದಾರೆ.ಇಬ್ಬರಿಂದ ತಪ್ಪಿಸಿಕೊಳ್ಳಲು ಚಂದು ಮನೆಯಿಂದ ಹೊರಗೆ ಓಡಿದ್ದಾರೆ.ಮರುದಿನ ವಿನಯ್ ಪತ್ನಿ ಮಮತಾ ಬಂದು ಚಂದು ಪತ್ನಿಯ ಮನ ಒಲಿಸಲು ಯತ್ನಿಸಿದ್ದಾಳೆ.ಇದಕ್ಕೆ ಒಪ್ಪದ ಕಾರಣ ಬೆದರಿಕೆ ತಂತ್ರ ಉಪಯೋಗಿಸಿದ್ದಾಳೆ.ಈ ವೇಳೆ ಚೆಂಗಪ್ಪ ಎಂಬ ವ್ಯಕ್ತಿ ಬಂದು ಖಾಲಿ ಪೇಪರ್ ಗಳಿಗೆ ಸಹಿ ಹಾಕುವಂತೆ ಬೆದರಿಕೆ ಹಾಕಿದ್ದಾನೆ.ನಾಲ್ವರು ಸೇರಿ ನೊಂದ ಮಹಿಳೆಯಿಂದ ಬಲವಂತವಾಗಿ ಸಹಿ ಹಾಕಿಸಿಕೊಳ್ಳಲು ಯತ್ನಿಸಿದ್ದಾರೆ.ಇದೇ ಸಮಯಕ್ಕೆ ಪೊಲೀಸರು ಸ್ಥಳಕ್ಕೆ ಬಂದು ನೊಂದ ಮಹಿಳೆಯನ್ನ ರಕ್ಷಿಸಿದ್ದಾರೆ.ಸಧ್ಯ ನೊಂದ ಮಹಿಳೆ ಲೈಂಗಿಕ ಕಿರುಕುಳ ನೀಡಿದ ವಿನಯ್ ಹಾಗೂ ಸಾಥ್ ನೀಡಿದ ಪತ್ನಿ ಮಮತಾ ,ಚಾಲಕ ರಾಘು ಮತ್ತು ಚೆಂಗಪ್ಪ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *