ಯುಟ್ಯೂಬ್ ಚಾನೆಲ್ ಪಾರ್ಟ್ನರ್ ಪತ್ನಿಗೆ ಲೈಂಗಿಕ ಕಿರುಕುಳ ಆರೋಪ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಮಾ18,Tv10 ಕನ್ನಡ

ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ವ್ಯಕ್ತಿ ತನ್ನ ಪಾರ್ಟ್ನರ್ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ವಿನಯ್,ಈತನ ಪತ್ನಿ ಮಮತ ,ಕಾರಿನ ಚಾಲಕ ರಾಘು ಹಾಗೂ ಚೆಂಗಪ್ಪ ಎಂಬುವರ ಮೇಲೆ ನೊಂದ ಮಹಿಳೆ ಎಫ್.ಐ.ಆರ್.ದಾಖಲು ಮಾಡಿದ್ದಾರೆ.

ನೊಂದ ಮಹಿಳೆಯ ಪತಿ ಚಂದು ಹಾಗೂ ವಿನಯ್ ಇಬ್ಬರೂ ಸೇರಿ ಉಖ ಖಿಗಿ ಕನ್ನಡ ಎಂಬ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ.ಚಾನೆಲ್ ಕೆಲಸ ಹೆಚ್ಚಾಗಿರುತ್ತದೆ ಎಂದು ಕಾರಣ ನೀಡಿ ವಿನಯ್ ತನ್ನ ಪಾರ್ಟ್ನರ್ ಚಂದು ಹಾಗೂ ಪತ್ನಿಗೆ ತಾನಿದ್ದ ಬೋಗಾದಿ ಮನೆಯಲ್ಲೇ ವಾಸವಿರುವಂತೆ ವ್ಯವಸ್ಥೆ ಮಾಡಿದ್ದಾನೆ.ಕೆಲವು ದಿನಗಳ ಹಿಂದೆ ವಿನಯ್ ಮಧ್ಯರಾತ್ರಿ ಚಂದು ಮನೆಗೆ ಬಂದು ಪತ್ನಿಯನ್ನ ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ.ಈ ವೇಳೆ ಸ್ಥಳಕ್ಕೆ ಬಂದ ಚಂದು ಪತ್ನಿಯ ರಕ್ಷಣೆಗೆ ಯತ್ನಿಸಿದ್ದಾರೆ. ವಿನಯ್ ಗೆ ಕಾರಿನ ಚಾಲಕ ರಾಘು ಜೊತೆ ಸೇರಿಕೊಂಡು ಚಂದು ಮೇಲೆ ಹಲ್ಲೆ ನಡೆಸಿದ್ದಾರೆ.ಇಬ್ಬರಿಂದ ತಪ್ಪಿಸಿಕೊಳ್ಳಲು ಚಂದು ಮನೆಯಿಂದ ಹೊರಗೆ ಓಡಿದ್ದಾರೆ.ಮರುದಿನ ವಿನಯ್ ಪತ್ನಿ ಮಮತಾ ಬಂದು ಚಂದು ಪತ್ನಿಯ ಮನ ಒಲಿಸಲು ಯತ್ನಿಸಿದ್ದಾಳೆ.ಇದಕ್ಕೆ ಒಪ್ಪದ ಕಾರಣ ಬೆದರಿಕೆ ತಂತ್ರ ಉಪಯೋಗಿಸಿದ್ದಾಳೆ.ಈ ವೇಳೆ ಚೆಂಗಪ್ಪ ಎಂಬ ವ್ಯಕ್ತಿ ಬಂದು ಖಾಲಿ ಪೇಪರ್ ಗಳಿಗೆ ಸಹಿ ಹಾಕುವಂತೆ ಬೆದರಿಕೆ ಹಾಕಿದ್ದಾನೆ.ನಾಲ್ವರು ಸೇರಿ ನೊಂದ ಮಹಿಳೆಯಿಂದ ಬಲವಂತವಾಗಿ ಸಹಿ ಹಾಕಿಸಿಕೊಳ್ಳಲು ಯತ್ನಿಸಿದ್ದಾರೆ.ಇದೇ ಸಮಯಕ್ಕೆ ಪೊಲೀಸರು ಸ್ಥಳಕ್ಕೆ ಬಂದು ನೊಂದ ಮಹಿಳೆಯನ್ನ ರಕ್ಷಿಸಿದ್ದಾರೆ.ಸಧ್ಯ ನೊಂದ ಮಹಿಳೆ ಲೈಂಗಿಕ ಕಿರುಕುಳ ನೀಡಿದ ವಿನಯ್ ಹಾಗೂ ಸಾಥ್ ನೀಡಿದ ಪತ್ನಿ ಮಮತಾ ,ಚಾಲಕ ರಾಘು ಮತ್ತು ಚೆಂಗಪ್ಪ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *