ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ದಂಧೆ ಮೇಲೆ ವಿಜಯನಗರ ಠಾಣೆ ಪೊಲೀಸರ ದಾಳಿ…ರಾಜಾಸ್ಥಾನ್ ಮೂಲದ ನಾಲ್ವರ ಬಂಧನ…95 ಗ್ಯಾಸ್ ಸಿಲಿಂಡರ್ ವಶ…

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ದಂಧೆ ಮೇಲೆ ವಿಜಯನಗರ ಠಾಣೆ ಪೊಲೀಸರ ದಾಳಿ…ರಾಜಾಸ್ಥಾನ್ ಮೂಲದ ನಾಲ್ವರ ಬಂಧನ…95 ಗ್ಯಾಸ್ ಸಿಲಿಂಡರ್ ವಶ…

ಮೈಸೂರು,ಮಾ20,Tv10 ಕನ್ನಡ

ಗೃಹಬಳಕೆ ಸಿಲಿಂಡರ್ ಗಳಿಂದ ವಾಣಿಜ್ಯ ಸಿಲಿಂಡರ್ ಗಳಿಗೆ ಅಕ್ರಮವಾಗಿ ರೀಫಿಲ್ಲಿಂಗ್ ಮಾಡುತ್ತಿದ್ದ ದಂಧೆ ಮೇಲೆ ವಿಜಯನಗರ ಠಾಣೆ ಪೊಲೀಸರು ದಾಳಿ ನಡೆಸಿ ರಾಜಾಸ್ಥಾನ್ ಮೂಲದ ನಾಲ್ವರನ್ನ ಬಂಧಿಸಿದ್ದಾರೆ.ಬಂಧಿತರಿಂದ ವಿವಿದ ಗ್ಯಾಸ್ ಕಂಪನಿಯ ಗೃಹಬಳಕೆ ಹಾಗೂ ವಾಣಿಜ್ಯ ಬಳಕೆಯ 95 ಸಿಲಿಂಡರ್ ಗಳನ್ನ ವಶಪಡಿಸಿಕೊಂಡಿದ್ದಾರೆ.ಅಲ್ಲದೆ ಗ್ಯಾಸ್ ರೀಫಿಲ್ಲಿಂಗ್ ಗಾಗಿ ಬಳಸುತ್ತಿದ್ದ 12 ರಾಡ್ ಗಳು ಮತ್ತು ಎರಡು ವಾಹನಗಳನ್ನೂ ಸಹ ವಶಕ್ಕೆ ಪಡೆದಿದ್ದಾರೆ.ರಾಜಾಸ್ಥಾನ್ ನ ಸುನಿಲ್ ಕುಮಾರ್,ದಿನೇಶ್,ಕೈಲಾಸ್,ಸುಭಾಷ್ ಭಿಷ್ಣೋಯಿ ಬಂಧಿತರು.ಮೈಸೂರಿನ ವಿಜಯನಗರ ನಾಲ್ಕನೇ ಹಂತದ ಖಾಲಿ ನಿವೇಶನವೊಂದರಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರು ದಂಧೆಕೋರರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ವಿಜಯನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.ಸಂಭಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ರೀಫಿಲ್ಲಿಂಗ್ ಮಾಡುತ್ತಿದ್ದುದು ದಾಳಿ ವೇಳೆ ಕಂಡು ಬಂದಿದೆ.ದಾಳಿ ನಡೆಸಿದ ವಿಜಯನಗರ ಠಾಣೆ ಪೊಲೀಸರು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳನ್ನ ಕರೆಸಿ ಪರಿಶೀಲನೆ ನಡೆಸಿ ಅಕ್ರಮವನ್ನ ಧೃಢಪಡಿಸಿಕೊಂಡಿದ್ದಾರೆ.ಹೆಚ್.ಪಿ,ಭಾರತ್ ಹಾಗೂ ಇಂಡೇನ್ ಕಂಪನಿಯ ಗೃಹಬಳಕೆ ಹಾಗೂ ವಾಣಿಜ್ಯ ಬಳಕೆಯ 95 ಸಿಲಿಂಡರ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಲಿಕ್ವಿಫಾಡ್ ಪೆಟ್ರೋಲಿಯಂ ಗ್ಯಾಸ್ ಕಂಟ್ರೋಲರ್ ಆರ್ಡರ್ 2000 ಹಾಗೂ ಅಗತ್ಯ ವಸ್ತು ಕಾಯ್ದೆ 3&7 ಅನ್ವಯದಂತೆ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *