ಕಾಗಿನೆಲೆ ಶಿವಾನಂದಪುರಿ ಶ್ರೀಗಳ ಆಶೀರ್ವಾದ ಪಡೆದ ಯದುವೀರ್,ಬಾಲರಾಜ್…ಮೈಸೂರು,ಮಾ20,Tv10 ಕನ್ನಡ

ಕಾಗಿನೆಲೆ ಶಿವಾನಂದಪುರಿ ಶ್ರೀಗಳ ಆಶೀರ್ವಾದ ಪಡೆದ ಯದುವೀರ್,ಬಾಲರಾಜ್…ಮೈಸೂರು,ಮಾ20,Tv10 ಕನ್ನಡ

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಅವರು ಕಾಗಿನೆಲೆ ಕನಕ ಗುರುಪೀಠದ ಮೈಸೂರು ಶಾಖಾ ಅಧ್ಯಕ್ಷರಾದ ಶ್ರೀ ಶಿವಾನಂದ ಪುರಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಸಿದ್ದರ್ಥನಗರದ ಶಾಖಾ ಮಠಕ್ಕೆ ಭೇಟಿ ನೀಡಿದ ಇಬ್ಬರು ಅಭ್ಯರ್ಥಿಗಳು ಶ್ರೀಗಳಿಗೆ ಫಲ ತಾಂಬೂಲ ನೀಡಿ ಆಶೀರ್ವಾದ ಪಡೆದರು.ಇದೆ ವೇಳೆ ಮಾತನಾಡಿದ ಶ್ರೀಗಳು ಅಭ್ಯರ್ಥಿಗಳು ಮಠಕ್ಕೆ ಬಂದು ಆಶಿರ್ವಾದ ಪಡೆದಿದ್ದು ಸಂತೋಷ ತಂದಿದೆ. ಕಲೆ, ಸಂಸ್ಕೃತಿ, ಧರ್ಮ, ಸಂಸ್ಕಾರ ಉಳಿಯುವಲ್ಲಿ ಮಹಾರಾಜರ ಪಾತ್ರ ಮಹತ್ವದ್ದು. ಯುವಕರಾದ ಯಧುವೀರ, ಹಾಗೂ ಬಾಲರಾಜ್ ರವರು ಅಭಿವೃದ್ಧಿ ನಿಟ್ಟಿನಲ್ಲಿ ಹೆಚ್ಚು ಕೆಲಸ ಮಾಡಲಿ, ಈ ಅವಿಭಜಿತ ಜಿಲ್ಲೆಗಳ ಅಭಿವೃದ್ಧಿಗೆ ಶ್ರಮಿಸಲಿ. ಮೋದಿಯವರು ದೇಶದ ಅಭಿೃದ್ಧಿಗಾಗಿ ಶ್ರಮಿಸುತ್ತಿದ್ದು, ಅವರ ಜತೆ ನೀವು ಕೈ ಜೋಡಿಸಿ ಎಂದು ಹರಸಿದರು.
ಅಭ್ಯರ್ಥಿ ಯಧುವೀರ ಅವರು ಮಾತನಾಡಿ, ನಮ್ಮ ಸಂಸ್ಥಾನಕ್ಕು ಶ್ರೀಗಳ ಮಠಕ್ಕೂ ಅಭಿನಾಭವ ಸಂಬಂಧ ಇದೆ. ಶ್ರೀಗಳು ತುಂಬು ಮನಸ್ಸಿನಿಂದ ಹರಿಸಿದ್ದಾರೆ. ಕುರುಬ ಸಮಾಜ ಹಾಗೂ ಮಠದ ಏಳಿಗೆಗಾಗಿ ಶ್ರಮಿಸುತ್ತೇನೆ. ನಮ್ಮ ಪೂರ್ವಜರು ಮಾಡಿರುವ ಕಾರ್ಯ ಮುಂದುವರಿಸುವ ಕೆಲಸಕ್ಕೆ ಕಂಕಣ ಬದ್ದನಾಗಿರುತ್ತೇನೆ ಎಂದರು.

ಇದೆ ವೇಳೆ ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕೆ.ಆರ್. ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ, ಜಿಲ್ಲಾ ಅಧ್ಯಕ್ಷ ಮಹದೇವ ಸ್ವಾಮಿ, ಮುಖಂಡರು ಗಳಾದ ಬಿ.ಎಂ. ರಘು, ಜೋಗಿಮಂಜು, ಶಿವಕುಮಾರ, ಎಂ.ಕೆ. ಶಂಕರ್, ರಮೇಶ್, ಸೋಮಶೇಖರ್, ಭಾನುಪ್ರಕಾಶ್, ಸುರೇಶ್, ಚಿಕ್ಕಮ್ಮ ಬಸವರಾಜ್, ಕಮಲಮ್ಮ, ಎಂ. ರಾಜೇಂದ್ರ, ಪುನೀತ್, ಪಾಪಣ್ಷ, ರಾಕೇಶ್ ಮತ್ತಿತರರು ಹಾಜರಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *