ಕಾಗಿನೆಲೆ ಶಿವಾನಂದಪುರಿ ಶ್ರೀಗಳ ಆಶೀರ್ವಾದ ಪಡೆದ ಯದುವೀರ್,ಬಾಲರಾಜ್…ಮೈಸೂರು,ಮಾ20,Tv10 ಕನ್ನಡ

ಕಾಗಿನೆಲೆ ಶಿವಾನಂದಪುರಿ ಶ್ರೀಗಳ ಆಶೀರ್ವಾದ ಪಡೆದ ಯದುವೀರ್,ಬಾಲರಾಜ್…ಮೈಸೂರು,ಮಾ20,Tv10 ಕನ್ನಡ

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಅವರು ಕಾಗಿನೆಲೆ ಕನಕ ಗುರುಪೀಠದ ಮೈಸೂರು ಶಾಖಾ ಅಧ್ಯಕ್ಷರಾದ ಶ್ರೀ ಶಿವಾನಂದ ಪುರಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಸಿದ್ದರ್ಥನಗರದ ಶಾಖಾ ಮಠಕ್ಕೆ ಭೇಟಿ ನೀಡಿದ ಇಬ್ಬರು ಅಭ್ಯರ್ಥಿಗಳು ಶ್ರೀಗಳಿಗೆ ಫಲ ತಾಂಬೂಲ ನೀಡಿ ಆಶೀರ್ವಾದ ಪಡೆದರು.ಇದೆ ವೇಳೆ ಮಾತನಾಡಿದ ಶ್ರೀಗಳು ಅಭ್ಯರ್ಥಿಗಳು ಮಠಕ್ಕೆ ಬಂದು ಆಶಿರ್ವಾದ ಪಡೆದಿದ್ದು ಸಂತೋಷ ತಂದಿದೆ. ಕಲೆ, ಸಂಸ್ಕೃತಿ, ಧರ್ಮ, ಸಂಸ್ಕಾರ ಉಳಿಯುವಲ್ಲಿ ಮಹಾರಾಜರ ಪಾತ್ರ ಮಹತ್ವದ್ದು. ಯುವಕರಾದ ಯಧುವೀರ, ಹಾಗೂ ಬಾಲರಾಜ್ ರವರು ಅಭಿವೃದ್ಧಿ ನಿಟ್ಟಿನಲ್ಲಿ ಹೆಚ್ಚು ಕೆಲಸ ಮಾಡಲಿ, ಈ ಅವಿಭಜಿತ ಜಿಲ್ಲೆಗಳ ಅಭಿವೃದ್ಧಿಗೆ ಶ್ರಮಿಸಲಿ. ಮೋದಿಯವರು ದೇಶದ ಅಭಿೃದ್ಧಿಗಾಗಿ ಶ್ರಮಿಸುತ್ತಿದ್ದು, ಅವರ ಜತೆ ನೀವು ಕೈ ಜೋಡಿಸಿ ಎಂದು ಹರಸಿದರು.
ಅಭ್ಯರ್ಥಿ ಯಧುವೀರ ಅವರು ಮಾತನಾಡಿ, ನಮ್ಮ ಸಂಸ್ಥಾನಕ್ಕು ಶ್ರೀಗಳ ಮಠಕ್ಕೂ ಅಭಿನಾಭವ ಸಂಬಂಧ ಇದೆ. ಶ್ರೀಗಳು ತುಂಬು ಮನಸ್ಸಿನಿಂದ ಹರಿಸಿದ್ದಾರೆ. ಕುರುಬ ಸಮಾಜ ಹಾಗೂ ಮಠದ ಏಳಿಗೆಗಾಗಿ ಶ್ರಮಿಸುತ್ತೇನೆ. ನಮ್ಮ ಪೂರ್ವಜರು ಮಾಡಿರುವ ಕಾರ್ಯ ಮುಂದುವರಿಸುವ ಕೆಲಸಕ್ಕೆ ಕಂಕಣ ಬದ್ದನಾಗಿರುತ್ತೇನೆ ಎಂದರು.

ಇದೆ ವೇಳೆ ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕೆ.ಆರ್. ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ, ಜಿಲ್ಲಾ ಅಧ್ಯಕ್ಷ ಮಹದೇವ ಸ್ವಾಮಿ, ಮುಖಂಡರು ಗಳಾದ ಬಿ.ಎಂ. ರಘು, ಜೋಗಿಮಂಜು, ಶಿವಕುಮಾರ, ಎಂ.ಕೆ. ಶಂಕರ್, ರಮೇಶ್, ಸೋಮಶೇಖರ್, ಭಾನುಪ್ರಕಾಶ್, ಸುರೇಶ್, ಚಿಕ್ಕಮ್ಮ ಬಸವರಾಜ್, ಕಮಲಮ್ಮ, ಎಂ. ರಾಜೇಂದ್ರ, ಪುನೀತ್, ಪಾಪಣ್ಷ, ರಾಕೇಶ್ ಮತ್ತಿತರರು ಹಾಜರಿದ್ದರು…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *