ಸಾಲ ವಸೂಲಿಗೆ ಕಿರುಕುಳ…ಪತ್ನಿಯನ್ನ ಅಡಮಾನ ಇಡುವಂತೆ ಧಂಕಿ…ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ…

ಸಾಲ ವಸೂಲಿಗೆ ಕಿರುಕುಳ…ಪತ್ನಿಯನ್ನ ಅಡಮಾನ ಇಡುವಂತೆ ಧಂಕಿ…ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ…

ಕೆ.ಆರ್.ನಗರ,ಮಾ21,Tv10 ಕನ್ನಡ

ಸಾಲ ವಸೂಲಿಗಾಗಿ ಪತ್ನಿಯ ಬಗ್ಗೆ ಹಗುರವಾಗಿ ನಿಂದಿಸಿದ ಹಿನ್ನಲೆ ಮನನೊಂದ ವ್ಯಕ್ತಿ ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹರವೆ ಗ್ರಾಮದಲ್ಲಿ ನಡೆದಿದೆ.ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ಹರೀಶ್ (40) ಮೃತ ದುರ್ದೈವಿ.ಹುಣಸೂರಿನ ರವಿ@ವಾಲೆ ರವಿ ಹಾಗೂ ಆತನ ತಮ್ಮ ಚಿನ್ನಸ್ವಾಮಿ ವಿರುದ್ದ ಕೊಲೆ ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಹುಣಸೂರು ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಹರೀಶ್ ಒಂದು ವರ್ಷದ ಹಿಂದೆ ರವಿಯಿಂದ ಒಂದು ಲಕ್ಷ ಸಾಲ ಪಡೆದಿದ್ದ.50 ಸಾವಿರ ಹಿಂದಿರುಗಿಸಿದ್ದು ಉಳಿದ 50 ಸಾವಿರ ಬಾಕಿ ಉಳಿದಿತ್ತು.ಹಣಕ್ಕಾಗಿ ರವಿ ದಿನನಿತ್ಯ ಪೀಡಿಸುತ್ತಿದ್ದ.ಅಂಗಡಿ ಮುಂದೆ,ಮನೆ ಮುಂದೆ ಬಂದು ಧಂಕಿ ಹಾಕುತ್ತಿದ್ದ.ನಿನ್ನ ಪತ್ನಿಯನ್ನ ತನ್ನ ಬಳಿ ಅಡಮಾನ ಇಡು ಎಂದು ಹಿಯ್ಯಾಳಿಸಿದ್ದ.ಇದರಿಂದ ಮನನೊಂದ ಹರೀಶ್ ವಾಯ್ಸ್ ಮೆಸೇಜ್ ಹಾಕಿ ನಾಪತ್ತೆಯಾದರು.ನನ್ನ ಸಾವಿಗೆ ರವಿ @ವಾಲೆ ರವಿ ಕಾರಣ ಎಂದು ಸ್ನೇಹಿತರಿಗೆ ಹಾಗೂ ಮನೆಯವರಿಗೆ ಕಳುಹಿಸಿ ನಾಪತ್ತೆಯಾದರು.ನಂತರ ಹುಡುಕಾಡಿದಾಗ ಹರೀಶ್ ರವರ ಮೃತದೇಹ ಬೈಕ್ ಸಮೇತ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸಾಲ ವಸೂಲಿ ಮಾಡಲು ಸಾಕಷ್ಟು ಕಿರುಕುಳ ನೀಡಿದ್ದಲ್ಲದೆ ಪತ್ನಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಆತ್ಮಹತ್ಯೆಗೆ ಪ್ರಚೋದಿಸಿದ ರವಿ ಹಾಗೂ ಆತನ ತಮ್ಮ ಚಿನ್ನು ಮೇಲೆ ಶಂಕೆ ವ್ಯಕ್ತಪಡಿಸಿರುವ ಪತ್ನಿ ಸುನಿತಾ ಕಾನೂನು ಕ್ರಮ ಕೈಗೊಳ್ಳುವಂತೆ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *