ಸಾಲ ವಸೂಲಿಗೆ ಕಿರುಕುಳ…ಪತ್ನಿಯನ್ನ ಅಡಮಾನ ಇಡುವಂತೆ ಧಂಕಿ…ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ…

ಸಾಲ ವಸೂಲಿಗೆ ಕಿರುಕುಳ…ಪತ್ನಿಯನ್ನ ಅಡಮಾನ ಇಡುವಂತೆ ಧಂಕಿ…ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ…

ಕೆ.ಆರ್.ನಗರ,ಮಾ21,Tv10 ಕನ್ನಡ

ಸಾಲ ವಸೂಲಿಗಾಗಿ ಪತ್ನಿಯ ಬಗ್ಗೆ ಹಗುರವಾಗಿ ನಿಂದಿಸಿದ ಹಿನ್ನಲೆ ಮನನೊಂದ ವ್ಯಕ್ತಿ ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹರವೆ ಗ್ರಾಮದಲ್ಲಿ ನಡೆದಿದೆ.ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ಹರೀಶ್ (40) ಮೃತ ದುರ್ದೈವಿ.ಹುಣಸೂರಿನ ರವಿ@ವಾಲೆ ರವಿ ಹಾಗೂ ಆತನ ತಮ್ಮ ಚಿನ್ನಸ್ವಾಮಿ ವಿರುದ್ದ ಕೊಲೆ ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಹುಣಸೂರು ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಹರೀಶ್ ಒಂದು ವರ್ಷದ ಹಿಂದೆ ರವಿಯಿಂದ ಒಂದು ಲಕ್ಷ ಸಾಲ ಪಡೆದಿದ್ದ.50 ಸಾವಿರ ಹಿಂದಿರುಗಿಸಿದ್ದು ಉಳಿದ 50 ಸಾವಿರ ಬಾಕಿ ಉಳಿದಿತ್ತು.ಹಣಕ್ಕಾಗಿ ರವಿ ದಿನನಿತ್ಯ ಪೀಡಿಸುತ್ತಿದ್ದ.ಅಂಗಡಿ ಮುಂದೆ,ಮನೆ ಮುಂದೆ ಬಂದು ಧಂಕಿ ಹಾಕುತ್ತಿದ್ದ.ನಿನ್ನ ಪತ್ನಿಯನ್ನ ತನ್ನ ಬಳಿ ಅಡಮಾನ ಇಡು ಎಂದು ಹಿಯ್ಯಾಳಿಸಿದ್ದ.ಇದರಿಂದ ಮನನೊಂದ ಹರೀಶ್ ವಾಯ್ಸ್ ಮೆಸೇಜ್ ಹಾಕಿ ನಾಪತ್ತೆಯಾದರು.ನನ್ನ ಸಾವಿಗೆ ರವಿ @ವಾಲೆ ರವಿ ಕಾರಣ ಎಂದು ಸ್ನೇಹಿತರಿಗೆ ಹಾಗೂ ಮನೆಯವರಿಗೆ ಕಳುಹಿಸಿ ನಾಪತ್ತೆಯಾದರು.ನಂತರ ಹುಡುಕಾಡಿದಾಗ ಹರೀಶ್ ರವರ ಮೃತದೇಹ ಬೈಕ್ ಸಮೇತ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸಾಲ ವಸೂಲಿ ಮಾಡಲು ಸಾಕಷ್ಟು ಕಿರುಕುಳ ನೀಡಿದ್ದಲ್ಲದೆ ಪತ್ನಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಆತ್ಮಹತ್ಯೆಗೆ ಪ್ರಚೋದಿಸಿದ ರವಿ ಹಾಗೂ ಆತನ ತಮ್ಮ ಚಿನ್ನು ಮೇಲೆ ಶಂಕೆ ವ್ಯಕ್ತಪಡಿಸಿರುವ ಪತ್ನಿ ಸುನಿತಾ ಕಾನೂನು ಕ್ರಮ ಕೈಗೊಳ್ಳುವಂತೆ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *