ಸಾಲ ವಸೂಲಿಗೆ ಕಿರುಕುಳ…ಪತ್ನಿಯನ್ನ ಅಡಮಾನ ಇಡುವಂತೆ ಧಂಕಿ…ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ…

ಸಾಲ ವಸೂಲಿಗೆ ಕಿರುಕುಳ…ಪತ್ನಿಯನ್ನ ಅಡಮಾನ ಇಡುವಂತೆ ಧಂಕಿ…ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ…

ಕೆ.ಆರ್.ನಗರ,ಮಾ21,Tv10 ಕನ್ನಡ

ಸಾಲ ವಸೂಲಿಗಾಗಿ ಪತ್ನಿಯ ಬಗ್ಗೆ ಹಗುರವಾಗಿ ನಿಂದಿಸಿದ ಹಿನ್ನಲೆ ಮನನೊಂದ ವ್ಯಕ್ತಿ ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹರವೆ ಗ್ರಾಮದಲ್ಲಿ ನಡೆದಿದೆ.ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ಹರೀಶ್ (40) ಮೃತ ದುರ್ದೈವಿ.ಹುಣಸೂರಿನ ರವಿ@ವಾಲೆ ರವಿ ಹಾಗೂ ಆತನ ತಮ್ಮ ಚಿನ್ನಸ್ವಾಮಿ ವಿರುದ್ದ ಕೊಲೆ ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಹುಣಸೂರು ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಹರೀಶ್ ಒಂದು ವರ್ಷದ ಹಿಂದೆ ರವಿಯಿಂದ ಒಂದು ಲಕ್ಷ ಸಾಲ ಪಡೆದಿದ್ದ.50 ಸಾವಿರ ಹಿಂದಿರುಗಿಸಿದ್ದು ಉಳಿದ 50 ಸಾವಿರ ಬಾಕಿ ಉಳಿದಿತ್ತು.ಹಣಕ್ಕಾಗಿ ರವಿ ದಿನನಿತ್ಯ ಪೀಡಿಸುತ್ತಿದ್ದ.ಅಂಗಡಿ ಮುಂದೆ,ಮನೆ ಮುಂದೆ ಬಂದು ಧಂಕಿ ಹಾಕುತ್ತಿದ್ದ.ನಿನ್ನ ಪತ್ನಿಯನ್ನ ತನ್ನ ಬಳಿ ಅಡಮಾನ ಇಡು ಎಂದು ಹಿಯ್ಯಾಳಿಸಿದ್ದ.ಇದರಿಂದ ಮನನೊಂದ ಹರೀಶ್ ವಾಯ್ಸ್ ಮೆಸೇಜ್ ಹಾಕಿ ನಾಪತ್ತೆಯಾದರು.ನನ್ನ ಸಾವಿಗೆ ರವಿ @ವಾಲೆ ರವಿ ಕಾರಣ ಎಂದು ಸ್ನೇಹಿತರಿಗೆ ಹಾಗೂ ಮನೆಯವರಿಗೆ ಕಳುಹಿಸಿ ನಾಪತ್ತೆಯಾದರು.ನಂತರ ಹುಡುಕಾಡಿದಾಗ ಹರೀಶ್ ರವರ ಮೃತದೇಹ ಬೈಕ್ ಸಮೇತ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸಾಲ ವಸೂಲಿ ಮಾಡಲು ಸಾಕಷ್ಟು ಕಿರುಕುಳ ನೀಡಿದ್ದಲ್ಲದೆ ಪತ್ನಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಆತ್ಮಹತ್ಯೆಗೆ ಪ್ರಚೋದಿಸಿದ ರವಿ ಹಾಗೂ ಆತನ ತಮ್ಮ ಚಿನ್ನು ಮೇಲೆ ಶಂಕೆ ವ್ಯಕ್ತಪಡಿಸಿರುವ ಪತ್ನಿ ಸುನಿತಾ ಕಾನೂನು ಕ್ರಮ ಕೈಗೊಳ್ಳುವಂತೆ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *