ಮದುವೆ ಆಗುವಂತೆ ಒತ್ತಾಯಿಸಿ ಪ್ರೇಯಸಿಯನ್ನ ಕೊಂದ ಆರೋಪ ಸಾಬೀತು…ಹಂತಕನಿಗೆ ಜೀವಾವಧಿ ಶಿಕ್ಷೆ…

ಮದುವೆ ಆಗುವಂತೆ ಒತ್ತಾಯಿಸಿ ಪ್ರೇಯಸಿಯನ್ನ ಕೊಂದ ಆರೋಪ ಸಾಬೀತು…ಹಂತಕನಿಗೆ ಜೀವಾವಧಿ ಶಿಕ್ಷೆ…

ಮೈಸೂರು,ಮಾ22,Tv10 ಕನ್ನಡ

ಮದುವೆ ಆಗುವಂತೆ ಒತ್ತಾಯಿಸುತ್ತಿದ್ದ ಪ್ರೇಯಸಿಯ ಉಸಿರುಗಟ್ಟಿಸಿ ಕೊಲೆಗೈದ ಆರೋಪ ಸಾಬೀತಾದ ಹಿನ್ನಲೆ ಹಂತಕನಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.ನಂಜನಗೂಡು ತಾಲೂಕು ಹುಲ್ಲಹಳ್ಳಿ ಹೋಬಳಿಯ ಹಾಡ್ಯಾ ಗ್ರಾಮದ ನಾಗೇಶ್ ಶಿಕ್ಷೆಗೆ ಒಳಗಾದ ಹಂತಕ.ಮೈಸೂರಿನ 3 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಭಾಗ್ಯ ರವರು ತೀರ್ಪು ನೀಡಿದ್ದಾರೆ.2019 ರಲ್ಲಿ ಲಕ್ಷ್ಮಿ ಎಂಬಾಕೆಯನ್ನ ಕೊಲೆ ಮಾಡಿದ ಆರೋಪ ಹೊತ್ತಿದ್ದ ನಾಗೇಶ್ ಇದೀಗ ಆರೋಪ ಸಾಬೀತಾದ ಹಿನ್ನಲೆ ಶಿಕ್ಷೆಗೆ ಒಳಗಾಗಿದ್ದಾನೆ.ಪತಿಯನ್ನ ಕಳೆದುಕೊಂಡಿದ್ದ ಲಕ್ಷ್ಮಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದಾಗ ನಾಗೇಶ್ ಪರಿಚಯವಾಗಿದ್ದಾನೆ.ತಾಯಿ ಮನೆಯಲ್ಲಿ ವಾಸವಿದ್ದ ಲಕ್ಷ್ಮಿಯನ್ನ ಮದುವೆ ಆಗುವುದಾಗಿ ನಂಬಿಸಿ ಬೇರೆ ಮನೆ ಮಾಡಿ ಇರಿಸಿದ್ದ.ಮದುವೆ ಆಗುವಂತೆ ಲಕ್ಷ್ಮಿ ಆಗಾಗ ನಾಗೇಶ್ ಮೇಲೆ ಒತ್ತಡ ಹೇರುತ್ತಿದ್ದಳು.ಮದುವೆಯಿಂದ ತಪ್ಪಿಸಿಕೊಳ್ಳಲು ನಾಗೇಶ್ ಲಕ್ಷ್ಮಿಯನ್ನ ಉಸಿರುಗಟ್ಟಿಸಿ ಕೊಂದಿದ್ದ.ಹುಲ್ಲಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ವಿರುದ್ದ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ವಾದ ವಿವಾದಗಳ ನಂತೆ ನಾಗೇಶ್ ಮೇಲಿನ ಕೊಲೆ ಆರೋಪ ಸಾಬೀತಾಗಿದ್ದು ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ.ಸರ್ಕಾರದ ಪರ ಸರ್ಕಾರಿ ಅಭಿಯೋಜಕರಾದ ಟಿ.ಹೆಚ್.ಲೋಲಾಕ್ಷಿ ವಾದ ಮಂಡಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *