ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಕಗ್ಗಂಟು ಇಲ್ಲ…ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಕಗ್ಗಂಟು ಇಲ್ಲ…ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

ಮೈಸೂರು,ಮಾ24,Tv10 ಕನ್ನಡ

ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ
ಯಾವ ಕಗ್ಗಂಟು ಆಗಿಲ್ಲ,
ಎಳೆದಾಟವೂ ಆಗಿಲ್ಲ.
ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.
ಇಪ್ಪತ್ತು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ.
ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ.
ಅವ್ರು 28 ಕ್ಷೇತ್ರ ಗೆಲ್ಲುತ್ತೇವೆ ಅಂತಾರೆ ಸಾಧ್ಯನಾ…?
ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲವಾಗಿದೆ.
ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಆಗಿದ್ದಾಗ ನಮಗೆ ಅನಾನುಕೂಲ ಆಗಿದೆ.ಅದರಂತೆ ಇವರ ಮೈತ್ರಿಯೂ ಅವರಿಗೆ ಅನುಕೂಲ ಆಗಲ್ಲ.
ಅವರ ಮೈತ್ರಿ ನಮಗೆ ಅನುಕೂಲ ಎಂದರು.
ನಾವು ನುಡಿದಂತೆ ನಡೆದಿದ್ದೇವೆ.
ಬಿಜೆಪಿಯವರಂತೆ ಸುಳ್ಳು ಹೇಳಲ್ಲ.
ಬಿಜೆಪಿಯವರು 600 ಭರವಸೆಗಳಲ್ಲಿ ಶೇಕಡಾ 10% ಈಡೇರಿಸಿಲ್ಲ.
ಮೋದಿಯವ್ರು ಜನಕ್ಕೆ 15 ಲಕ್ಷ ಕೋಟ್ರಾ…?
ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ರಾ..?
ರೈತರ ಆದಾಯ ಡಬಲ್ ಮಾಡಿದ್ರಾ..? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಕುಟುಂಬ ರಾಜಕಾರಣ ಎಂಬ ಆರೋಪವನ್ನ
ಸ್ಪಷ್ಟವಾಗಿ ನಿರಾಕರಿಸಿದರು.
ಜನರು ಬಯಸಿದವರಿಗೆ ಟಿಕೆಟ್ ಕೊಟ್ಟಿದ್ದೇವೆ.
ಇದರಲ್ಲಿ ಕುಟುಂಬ ರಾಜಕಾರಣ ಇಲ್ಲ ಎಂದರು.ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ರಣತಂತ್ರದ ಗುಟ್ಟು ಇದೆ.
ನಿಮಗೆಲ್ಲಾ ರಾಜಕೀಯ ಗುಟ್ಟು ಬಿಟ್ಟುಕೊಡಕ್ಕಾಗಲ್ಲ.
ಕೆಲವು ಗುಟ್ಟುಗಳನ್ನ ಗುಟ್ಟಾಗಿಯೇ ಇಡಬೇಕು.
ಲೋಕಸಭಾ ಚುನಾವಣೆಯಲ್ಲಿ ಕೆಲವು ಗುಟ್ಟುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *