ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಮೈಸೂರು,ಮಾ28,Tv10 ಕನ್ನಡ

ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿದೆ.ಪೊಲೀಸರ ಮಿಂಚಿನ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ಮತ್ತು ಜಾಹ್ನವಿ ರವರು ಪ್ರಶಂಸಿಸಿದ್ದಾರೆ.

ಸಾತಗಳ್ಳಿ ನಿವಾಸಿ ಜ್ಯೋತಿ ಎಂಬುವರು ಆಟೋದಲ್ಲಿ ಮೈಸೂರಿನ ಅಶೋಕಾ ರಸ್ತೆಯಲ್ಲಿರುವ ಲಲಿತಾ ಜ್ಯೂಯಲರಿಗೆ ಬಂದಿದ್ದಾರೆ.ಹಿಂದೆ ಖರೀದಿಸಿದ್ದ 60 ಗ್ರಾಂ ಚಿನ್ನದ ವಡವೆಗಳನ್ನ ಬದಲಾಯಿಸಿಕೊಳ್ಳಲು ಬಂದಿದ್ದಾರೆ.ಆಟೋ ಇಳಿಯುವ ವೇಳೆ ಚಿನ್ನದ ವಡವೆ ಇದ್ದ ವ್ಯಾನಿಟಿ ಬ್ಯಾಗ್ ಮರೆತುಹೋಗಿದ್ದಾರೆ.ಕೂಡಲೇ ಎಚ್ಚೆತ್ತ ಜ್ಯೋತಿ ರವರು ಲಷ್ಕರ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.ನಿರೀಕ್ಷಕರಾದ ಮಹಮದ್ ಸಲೀ ಅಬ್ಬಾಸ್ ರವರು ಮಿಂಚಿನ ಕಾರ್ಯಾಚರಣೆ ನಡೆಸಿ ಕೇವಲ ಒಂದು ಗಂಟೆ ವೇಳೆಯಲ್ಲೇ ಆಟೋ ಪತ್ತೆ ಹಚ್ಚಿ ಚಿನ್ನದ ವಡವೆಗಳಿದ್ದ ಬ್ಯಾಗ್ ಪತ್ತೆಹಚ್ಚಿದ್ದಾರೆ.ಜ್ಯೋತಿ ರವರು ಕುಳಿತಿದ್ದ ಸೀಟ್ ಹಿಂದೆ ಇದ್ದ ವ್ಯಾನಿಟಿ ಬ್ಯಾಗ್ ನ್ನ ಆಟೋ ಚಾಲಕ ಮಹಮದ್ ನಸೀರ್ ರವರೂ ಸಹ ಗಮನಿಸಿಲ್ಲ.ಪೊಲೀಸರು ಆಟೋ ಪರಿಶೀಲನೆ ನಡೆಸಿದಾಗ ಬ್ಯಾಗ್ ಇರುವುದು ಪತ್ತೆಯಾಗಿದೆ.ಘಟನೆ ನಡೆದ ಕೇವಲ ಒಂದು ಗಂಟೆ ಅವಧಿಯಲ್ಲಿ ಕಳೆದುಕೊಂಡಿದ್ದ ಚಿನ್ನಾಭರಣವನ್ನ ಮಾಲೀಕರಿಗೆ ತಲುಪಿಸುವಲ್ಲಿ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆ ಮೆಚ್ಚುಗೆಗೆ ಪಾತ್ರವಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *