ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಮೈಸೂರು,ಮಾ28,Tv10 ಕನ್ನಡ

ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿದೆ.ಪೊಲೀಸರ ಮಿಂಚಿನ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ಮತ್ತು ಜಾಹ್ನವಿ ರವರು ಪ್ರಶಂಸಿಸಿದ್ದಾರೆ.

ಸಾತಗಳ್ಳಿ ನಿವಾಸಿ ಜ್ಯೋತಿ ಎಂಬುವರು ಆಟೋದಲ್ಲಿ ಮೈಸೂರಿನ ಅಶೋಕಾ ರಸ್ತೆಯಲ್ಲಿರುವ ಲಲಿತಾ ಜ್ಯೂಯಲರಿಗೆ ಬಂದಿದ್ದಾರೆ.ಹಿಂದೆ ಖರೀದಿಸಿದ್ದ 60 ಗ್ರಾಂ ಚಿನ್ನದ ವಡವೆಗಳನ್ನ ಬದಲಾಯಿಸಿಕೊಳ್ಳಲು ಬಂದಿದ್ದಾರೆ.ಆಟೋ ಇಳಿಯುವ ವೇಳೆ ಚಿನ್ನದ ವಡವೆ ಇದ್ದ ವ್ಯಾನಿಟಿ ಬ್ಯಾಗ್ ಮರೆತುಹೋಗಿದ್ದಾರೆ.ಕೂಡಲೇ ಎಚ್ಚೆತ್ತ ಜ್ಯೋತಿ ರವರು ಲಷ್ಕರ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.ನಿರೀಕ್ಷಕರಾದ ಮಹಮದ್ ಸಲೀ ಅಬ್ಬಾಸ್ ರವರು ಮಿಂಚಿನ ಕಾರ್ಯಾಚರಣೆ ನಡೆಸಿ ಕೇವಲ ಒಂದು ಗಂಟೆ ವೇಳೆಯಲ್ಲೇ ಆಟೋ ಪತ್ತೆ ಹಚ್ಚಿ ಚಿನ್ನದ ವಡವೆಗಳಿದ್ದ ಬ್ಯಾಗ್ ಪತ್ತೆಹಚ್ಚಿದ್ದಾರೆ.ಜ್ಯೋತಿ ರವರು ಕುಳಿತಿದ್ದ ಸೀಟ್ ಹಿಂದೆ ಇದ್ದ ವ್ಯಾನಿಟಿ ಬ್ಯಾಗ್ ನ್ನ ಆಟೋ ಚಾಲಕ ಮಹಮದ್ ನಸೀರ್ ರವರೂ ಸಹ ಗಮನಿಸಿಲ್ಲ.ಪೊಲೀಸರು ಆಟೋ ಪರಿಶೀಲನೆ ನಡೆಸಿದಾಗ ಬ್ಯಾಗ್ ಇರುವುದು ಪತ್ತೆಯಾಗಿದೆ.ಘಟನೆ ನಡೆದ ಕೇವಲ ಒಂದು ಗಂಟೆ ಅವಧಿಯಲ್ಲಿ ಕಳೆದುಕೊಂಡಿದ್ದ ಚಿನ್ನಾಭರಣವನ್ನ ಮಾಲೀಕರಿಗೆ ತಲುಪಿಸುವಲ್ಲಿ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆ ಮೆಚ್ಚುಗೆಗೆ ಪಾತ್ರವಾಗಿದೆ…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *