Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

ನಂಜನಗೂಡು,ಮಾ28,Tv10 ಕನ್ನಡ

ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ ಅಮಾನತುಪಡಿಸಿ ಆದೇಶ ಹೊರಡಿಸಿದೆ.ಇದು Tv10 ಕನ್ನಡ ವಾಹಿನಿ ವರದಿಯ ಫಲಶೃತಿಯೂ ಆಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರದ ಹದಿನಾರು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದರು.ಈ ಸಂಭಂಧ ಸಾಕಷ್ಟು ಬಾರಿ ವಿಧ್ಯಾರ್ಥಿಗಳು ಮನವಿ ಮಾಡಿದ್ದರೂ ಪ್ರಾಂಶುಪಾರಾದ ಪ್ರಸನ್ನ ಕುಮಾರ್ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸಿದ್ದರು.ಈ ಬಗ್ಗೆ Tv10 ಕನ್ನಡ ವಾಹಿನಿಯಲ್ಲಿ ವರದಿ ಮಾಡಿ ಸರ್ಕಾರವನ್ನ ಎಚ್ಚರಿಸಲಾಗಿತ್ತು.ಅಲ್ಲದೆ ವಿಧ್ಯಾರ್ಥಿಗಳು ಹದಿನಾರು ಗ್ರಾಮಪಂಚಾಯ್ತಿಗೆ ಮುತ್ತಿಗೆ ಹಾಕಿ ಆಕ್ರೋಷ ವ್ಯಕ್ತಪಡಿಸಿದ್ದರು.ಈ ಸಂಭಂಧ ಕರ್ನಾಟಕ ವಸತಿ ಶಿಕ್ಷಣ ಸಂಶ್ಥೆಗಳ ಸಂಘ ಸರ್ಕಾರೇತರ ಇಲಾಖೆಯ ಅಧಿಕಾರಿಗಳು ವಸತಿಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅಡುಗೆಗೆ ಗುಣಮಟ್ಟದ ತರಕಾರಿಗಳನ್ನ ಬಳಸದಿರುವುದು,ವಿಧ್ಯಾರ್ಥಿಗಳು ಚರ್ಮರೋಗದಿಂದ ಬಳಲುತ್ತಿರುವುದು,ಕುಡಿಯವ ನೀರನ್ನ ಸಮರ್ಪಕವಾಗಿ ಪೂರೈಸದಿರುವುದು,ಕೊಠಡಿಗಳ ಸ್ವಚ್ಛತೆ ಬಗ್ಗೆ ಗಮನ ಹರಿಸದಿರುವುದು ಕಂಡು ಬಂದಿದೆ.ಈ ಹಿನ್ನಲೆ ಅಧಿಕಾರಿಗಳು ಪ್ರಾಂಶುಪಾಲ ಪ್ರಸನ್ನ ಕುಮಾರ್ ರನ್ನ ಅಮಾನತುಪಡಿಸಿ ಇಲಾಖಾ ವಿಚಾರಣೆಗೆ ಆದೇಶ ಹೊರಡಿಸಿದ್ದಾರೆ.ಇದು Tv10 ಕನ್ನಡ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *