ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ದಿ ಸಂಘದಲ್ಲಿ ವಿಶ್ವಮಹಿಳಾದಿನ ಆಚರಣೆ…ಸಾಧಕರಿಗೆ ಸನ್ಮಾನ…

ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ದಿ ಸಂಘದಲ್ಲಿ ವಿಶ್ವಮಹಿಳಾದಿನ ಆಚರಣೆ…ಸಾಧಕರಿಗೆ ಸನ್ಮಾನ…

ಮೈಸೂರು,ಮಾ29,Tv10 ಕನ್ನಡ

ನೇಗಿಲ ಯೋಗಿ ಮಹಿಳೆಯರ ಕ್ಷೇಮಾಭಿವೃದ್ಧಿ ಸಂಘದಿಂದ ಇಂದು ವಿಶ್ವ ಮಹಿಳಾ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಕಾವೇರಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಸರಳಾ ಚಂದ್ರಶೇಖರ್ ಕಾರ್ಯಕ್ರಮವನ್ನ ಉದ್ಘಾಟಿಸಿದರು.ನಂತರ ಮಾತನಾಡಿ
ಮಹಿಳೆಯ ಜವಾಬ್ದಾರಿಯ ಸಂದರ್ಭದಲ್ಲಿ ಆರೋಗ್ಯವನ್ನು ಮರೆಯಬಾರದು. ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಕುಟುಂಬ ಆರೋಗ್ಯದಿಂದ ಇರುತ್ತೆ. ಸಮಾಜ, ದೇಶ ಆರೋಗ್ಯದಿಂದ ಇರುತ್ತದೆ. ಆಗ ತೊಟ್ಟಿಲು ತೂಗಬಲ್ಲ ಕೈಗಳು ಜಗತ್ತನ್ನೇ ತೂಗಬಲ್ಲವಾಗುತ್ತವೆ ಎಂದರು.
ಕಾಲ ಮುಂದುವರಿದರೂ ಇಂದಿಗೂ ಮಹಿಳೆ ಶೋಷಣೆಗೆ ಒಳಗಾಗುತ್ತಿರುವುದು ಬೇಸರದ ಸಂಗತಿ . ಶಿಕ್ಷಣದ ಕೊರತೆಯಿಂದಾಗ ಶೋಷಣೆಗೆ ಒಳಗಾಗುತ್ತಿದ್ದಾರೆ. ಮಹಿಳೆ ಸೂಕ್ತ ಶಿಕ್ಷಣ ಪಡೆಯಬೇಕು ಅಲ್ಲದೆ ಸರ್ಕಾರಗಳು ಸ್ತ್ರೀಯರ ಏಳ್ಗೆಗೆ ಶ್ರಮಿಸುತ್ತಿದ್ದು ಅಂಥ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕೆ.ಎಸ್.ಓ.ಯು ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಜಾನ್ಹವಿ ಮಾತನಾಡಿ, ಭಾರತದಲ್ಲಿ ವಿವಾಹ ವಿಚ್ಚೇದನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪತಿ ಪತ್ನಿಯರ ನಡುವೆ ತನ್ನದೆ ಸರಿ ಎನ್ನುವ ಮನೋಭಾವನೆ ಇದಕ್ಕೆ ಕಾರಣವಾಗಿದೆ. ಕುಟುಂಬದಲ್ಲಿ ಯಾರಾದರು ಒಬ್ಬರೂ ಸೋಲುವುದನ್ನು ಕಲಿಯಬೇಕು. ಸೋತರೆ ಮಾತ್ರ ಸಂಬಂಧ ಉಳಿಯುತ್ತದೆ‌. ಒಮ್ಮೆ
ಸೋತು ಜೀವನವನ್ನು ಗೆಲುವು ಎನ್ನಬಹುದು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗೌರವಿಸಲಾಯಿತು.
ಮೈ.ವಿ.ವಿ ಸ್ಕೂಲ್ ಆಫ್ ಪ್ಲಾನಿಂಗ್ ಮತ್ತು ಆರ್ಕಿಟೆಕ್ಚರ್ ನ ಸಹಾಯಕ ಪ್ರಾಧ್ಯಾಪಕಿ ಮೈಸೂರು ಡಾ.ಎಸ್.ಯಶಸ್ವಿನಿ, ಬಿಕೆಜಿ ಆಸ್ಪತ್ರೆ ಗೈನಕಾಲೆಜಿಕಲ್ ಡಾ.ಡಿ.ಆರ್.ರಮ್ಯ, ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಿ.ಸುಚೇತನ, ಡೆಕ್ಕನ್ ಹೆರಾಲ್ಡ್ ಹಿರಿಯ ವರದಿಗಾರ್ತಿ ಪಿ.ಶಿಲ್ಪ, ವೈದ್ಯೆ ಡಾ.ಎಚ್.ಸಿ.ಶೈಲಜಾ ರಾಣಿ ಮತ್ತು ಕರ್ನಾಟಕ ಕ್ರಿಕೆಟ್ ಮಹಿಳಾ ತಂಡದ ಮಾಜಿ ನಾಯಕಿ ರಕ್ಷಿತಾ ಕೃಷ್ಣಪ್ಪ ಅವರನ್ನು ಸನ್ಮಾನಿಸಲಾಯಿತು.

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ರಾಗಿಯಿಂದ ಮಾಡಿದ ಅಡುಗೆಗಳ ಸ್ಪರ್ಧೆಯಲ್ಲಿ ಮಮತಾ ಪ್ರಿಯಾ ಶ್ರೀನಿವಾಸ್ ದ್ವಿತೀಯಾ, ಸುಧಾ ಶ್ರೀನಿವಾಸ್ ತೃತೀಯ ಬಹುಮಾನ ಪಡೆದರು.
ತೋರಣ ಕಟ್ಟುವ ಸ್ಪರ್ಧೆಯಲ್ಲಿ ಶ್ವೇತಾ ಪ್ರಥಮ, ಸುಶೀಲ ದ್ವೀತಿಯಾ ಮತ್ತು ರೇಣುಕಾ ತೃತೀಯಬಹುಮಾನ ಪಡೆದರು.
ಅ ಆ ಇ ಈ ವೇಗವಾಗಿ ಬರೆಯುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಸೌಮ್ಯಶ್ರೀ, ದ್ವಿತೀಯ ಬಹುಮಾನವನ್ನು ಪ್ರಭಾಲೋಕೇಶ್ ಹಾಗೂ ತೃತೀಯ ಬಹುಮಾನವನ್ನು ಪ್ರಿಯ ಶ್ರೀನಿವಾಸ್ ಪಡೆದರು.
ಕಾರ್ಯಕ್ರಮದಲ್ಲಿ ನೇಗಿಲ ಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಜೆ ಶೋಭಾ ರಮೇಶ್
ನೇಗಿಲ ಯೋಗಿ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ರವಿಕುಮಾರ್ , ನೇಗಿಲಯೋಗಿ ಮಹಿಳೆಯರ ಕ್ಷೇಮಾಭಿವೃದ್ದಿ ಸಂಘದ ಕಾರ್ಯದರ್ಶಿ ಬಿ.ಪಿ.ಉಷಾರಾಣಿ, ಖಜಾಂಚಿ ಅನಿತಾ ಹೇಮಂತ್, ನಿರ್ದೇಶಕರಾದ ಅನಿತ ಮನೋಹರ್, ಬಿ.ಹೆಚ್.ಲತಾ, ಮಂಜುಳಾ ಭದ್ರೇಗೌಡ, ಲಲಿತಾ ರಂಗನಾಥ್, ಸುವರ್ಣರಾಜ್, ಎಂ ಪ್ರತಿಮಾ, ಗೌರಮ್ಮ, ಟಿ.ಎಂ.ಸವಿತಾ ಉಪಸ್ಥಿತರಿದ್ದರು…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *