ವಿಚ್ಛೇದನ ಪಡೆದಿದ್ದರೂ ಅತ್ತೆ,ಗಂಡನಿಂದ ಕಿರುಕುಳ ಆರೋಪ…ಗೃಹಿಣಿ ಆತ್ಮಹತ್ಯೆ…

ವಿಚ್ಛೇದನ ಪಡೆದಿದ್ದರೂ ಅತ್ತೆ,ಗಂಡನಿಂದ ಕಿರುಕುಳ ಆರೋಪ…ಗೃಹಿಣಿ ಆತ್ಮಹತ್ಯೆ…

ಮೈಸೂರು,ಮಾ30,Tv10 ಕನ್ನಡ

ವಿಚ್ಛೇದನ ಪಡೆದಿದ್ದರೂ ಅತ್ತೆ ಹಾಗೂ ಗಂಡ ನೀಡಿದ ಮಾನಸಿಕ ಕಿರುಕುಳಕ್ಕೆ ಬೇಸತ್ತ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಜನತಾನಗರದಲ್ಲಿ ನಡೆದಿದೆ.ಲಕ್ಷ್ಮಿ(39) ಮೃತ ದುರ್ದೈವಿ.19 ವರ್ಷಗಳ ಹಿಂದೆ ನಾರಾಯಣ ಎಂಬಾತನನ್ನ ವಿವಾಹವಾಗಿದ್ದ ಲಕ್ಷ್ಮಿ ಎರಡು ಮಕ್ಕಳ ತಾಯಿ ಆಗಿದ್ದರು.ಕೌಟುಂಬಿಕ ಕಲಹ ಹಿನ್ನಲೆ ಇಬ್ಬರೂ ವಿಚ್ಛೇದನ ಪಡೆದಿದ್ದರು.ಹೀಗಿದ್ದರೂ ಇಬ್ಬರನ್ನ ಒಂದು ಮಾಡುವ ರಾಜಿ ಸಂಧಾನ ವಿಫಲವಾಗಿತ್ತು.ಮಕ್ಕಳು ಗಂಡನ ಜೊತೆ ಇದ್ದರು. ಜನತಾ ನಗರದ ಒಂದೇ ರಸ್ತೆಯಲ್ಲಿ ಲಕ್ಷ್ಮಿ ಪ್ರತ್ಯೇಕವಾಗಿ ವಾಸವಿದ್ದರು.ಮಕ್ಕಳು ತನ್ನಿಂದ ದೂರ ಇದ್ದರೆಂಬ ನೋವು ಲಕ್ಷ್ಮಿಯನ್ನ ಕಡುತ್ತಿತ್ತು.ಜೊತೆಗೆ ಅತ್ತೆ ದೇವಮ್ಮ ಹಾಗೂ ಗಂಡ ಚುಚ್ಚುಮಾತುಗಳನ್ನ ಆಡಿ ನಿಂದಿಸುತ್ತಿದ್ದರು.ಇದರಿಂದ ಮನನೊಂದ ಲಕ್ಷ್ಮಿ ನೇಣಿಗೆ ಶರಣಾಗಿದ್ದಾರೆ.ಅತ್ತೆ ಹಾಗೂ ಗಂಡನ ಕಿರುಕುಳದಿಂದಾಗಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಸಹೋದರ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *