ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಸಾಧನೆಗೈದ ಸರ್ಕಾರಿ ವಸತಿ ಶಾಲೆ ವಾರ್ಡನ್…ಅಭಿನಂದಿಸುವುದನ್ನೂ ಮರೆತ ಇಲಾಖೆ…

ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಸಾಧನೆಗೈದ ಸರ್ಕಾರಿ ವಸತಿ ಶಾಲೆ ವಾರ್ಡನ್…ಅಭಿನಂದಿಸುವುದನ್ನೂ ಮರೆತ ಇಲಾಖೆ…

ನಂಜನಗೂಡು,ಏ1,Tv10 ಕನ್ನಡ

ಸಾಧನೆಗೆ ಯಾವುದೇ ಮಿತಿ ಇಲ್ಲ,ಅಡ್ಡಿಯೂ ಇಲ್ಲ.ಮನಸ್ಸಿದ್ದರೆ ಮಾರ್ಗ ಎಂಬುದನ್ನ ನಿರೂಪಿಸಿದ್ದಾರೆ ನಂಜನಗೂಡು ತಾಲೂಕಿನ ಮಹದೇವನಗರ ಗ್ರಾಮದ ಮೂಳೆಗುಡ್ಡ ಬಳಿ ಇರುವ ಮುರಾರ್ಜಿ ದೇಸಾಯಿ ವಸತಿ ಪ್ರೌಢ ಶಾಲೆಯ ಮೇಲ್ವಿಚಾರಕ ಗಣಪತಿ ಜಕಾತಿ.ಸಾವಿರಾರು ಕಿಲೋಮೀಟರ್ ದೂರ ಇರುವ ಥೈಲ್ಯಾಂಡ್ ದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಚಕ್ರ ಎಸೆತ ಮತ್ತು 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮಿಕ್ಸೆಡ್ ರಿಲೆ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದಾರೆ.ಸ್ವಂತ ಖರ್ಚಿನಲ್ಲಿ ವಿದೇಶಕ್ಕೆ ತೆರಳಿ ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆ ಮಾಡಿದ ವಾರ್ಡನ್ ಗೆ ತಾವು ಕೆಲಸ ಮಾಡುತ್ತಿರುವ ಸಮಾಜ ಕಲ್ಯಾಣ ಇಲಾಖೆ ಸಹ ಅಭಿನಂದಿಸುವುದನ್ನ ಮರೆತು ಅಗೌರವ ಸೂಚಿಸುತ್ತಿದೆ.ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಕ್ರೀಡೆಗೆ ತೆರಳಲು ಪ್ರಾಯೋಜಕರಿಲ್ಲದೆ ಸಾಕಷ್ಟು ಕ್ರೀಡಾಪಟುಗಳು ಸಾಧನೆ ಮಾಡಲು ಸಾಧ್ಯವಾಗಿಲ್ಲ.ಇಂತಹ ದಿನಗಳಲ್ಲಿ ಸ್ವಂತ ಖರ್ಚಿನಲ್ಲಿ ಥೈಲ್ಯಾಂಡ್ ಗೆ ತೆರಳಿ ಭಾರತಕ್ಕೆ ಕೀರ್ತಿ ತಂದಿದ್ದಾರಲ್ಲದೆ ಯುವ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಿದ್ದಾರೆ.ಜಿಲ್ಲಾ ಉಸ್ತುವಾರಿ ಡಾ.ಹೆಚ್.ಸಿ.ಮಹದೇವಪ್ಪನವರೇ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾರೆ.ಹೀಗಿದ್ದೂ ತಮ್ಮ ಇಲಾಖೆಯಲ್ಲೇ ಸೇವೆ ಸಲ್ಲಿಸುತ್ತಿರುವ ಈ ಪ್ರತಿಭೆಗೆ ಪ್ರಾಯೋಜಕತ್ವ ಸಿಕ್ಕಿಲ್ಲ.ಕನಿಷ್ಟಪಕ್ಷ ಅಭಿನಂದನೆಯಾದರೂ ದೊರೆಯುವುದೇ…?

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *