
ಕರ್ತವ್ಯ ಲೋಪ…ಬೋಗಾದಿ ಚೆಕ್ ಪೋಸ್ಟ್ ಸಿಬ್ಬಂದಿಗಳ ಅಮಾನತಿಗೆ ಜಿಲ್ಲಾಧಿಕಾರಿಗಳಿಂದ ಆದೇಶ…
- TV10 Kannada Exclusive
- April 2, 2024
- No Comment
- 2600

ಮೈಸೂರು,ಏ2,Tv10 ಕನ್ನಡ

ಚುನಾವಣೆ ಹಿನ್ನಲೆ ಬೋಗಾದಿ ಚೆಕ್ ಪೋಸ್ಟ್ ನಲ್ಲಿ ನಿಯುಕ್ತಿಗೊಳಿಸಲಾಗಿರುವ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವಲ್ಲಿ ಲೋಪವೆಸಗಿರುವ ಹಿನ್ನಲೆ ಅಮಾನತುಗೊಳಿಸುವಂತೆ ಹಾಗೂ ಇಲಾಖಾ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಮೈಸೂರು ಕೊಡಗು ಲೋಕಸಭಾ ಕ್ಷೇತದ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.ನಿನ್ನೆ ರಾತ್ರಿ ಜಿಲ್ಲಾಧಿಕಾರಿಗಳು ಸುಮಾರು 10.30 ರ ವೇಳೆಯಲ್ಲಿ ಬೋಗಾದಿ ಚೆಕ್ ಪೋಸ್ಟ್ ಬಳಿ ಪರಿಶೀಲನೆಗೆ ತೆರಳಿದಾಗ ಸಿಬ್ಬಂದಿಗಳು ಸೂಕ್ತವಾಗಿ ಕರ್ತವ್ಯ ನಿರ್ವಹಿಸದಿರುವುದು ಕಂಡುಬಂದಿದೆ.ಯಾವುದೇ ವಾಹನಗಳನ್ನ ತಡೆದು ತಪಾಸಣೆ ನಡೆಸದಿರುವುದು ಕಂಡುಬಂದಿದೆ.ಅಲ್ಲದೆ ಯಾವುದೇ ಸಿಬ್ಬಂದಿಗಳು ಅಲರ್ಟ್ ಆಗಿ ಕೆಲಸ ಮಾಡದಿರುವುದು ಸಹ ಕಂಡು ಬಂದಿದೆ.ಈ ಹಿನ್ನಲೆ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳನ್ನ ಪೊಲೀಸರು ಸೇರಿದಂತೆ ಅಮಾನತು ಪಡಿಸುವಂತೆ SST ತಂಡದ ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ…