98.52 ಕೋಟಿ ಬಿಯರ್ ಕಚ್ಚಾ ವಸ್ತುಗಳು ಸೀಜ್…ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ…ಯುನೈಟೆಡ್ ಬ್ರೆವರೀಸ್ ನ 17 ಆರೋಪಿಗಳು ನಾಪತ್ತೆ…ಚುನಾವಣೆ ಹಿನ್ನಲೆ ಅಕ್ರಮ ದಾಸ್ತಾನು…?
- TV10 Kannada Exclusive
- April 3, 2024
- No Comment
- 469
ನಂಜನಗೂಡು,ಏ3,Tv10 ಕನ್ನಡ
ನಂಜನಗೂಡು ತಾಲೂಕು ಇಮ್ಮಾವು ಗ್ರಾಮ ತಾಂಡ್ಯಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪನಿ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 98.52 ಕೋಟಿ ಮೊತ್ತದ ಬಿಯರ್ ಕಚ್ಚಾ ವಸ್ತುಗಳನ್ನ ಸೀಜ್ ಮಾಡಿದ್ದಾರೆ.ಘಟನೆಗೆ ಸಂಭಂಧಿಸಿದಂತೆ 17 ಮಂದಿ ಆರೋಪಿಗಳು ನಾಪತ್ತೆಯಾಗಿದ್ದಾರೆ.ಚಾಮರಾಜನಗರ ಲೋಕಸಭಾ ಕ್ಷೇತ್ರದ ಹಾಗೂ ಮೈಸೂರು ಜಿಲ್ಲೆ ವ್ಯಾಪ್ತಿಯ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪನಿಯಲ್ಲಿ ಅಕ್ರಮ ದಾಸ್ತಾನು ಬೆಳಕಿಗೆ ಬಂದಿದೆ.ಚಾಮರಾಜನಗರ ಜಿಲ್ಲಾಧಿಕಾರಿಗಳು ಹಾಗೂ ಲೋಕಸಭಾ ಚುನಾವಣಾಧಿಕಾರಿಗಳ ಕಚೇರಿಗೆ ಬಂದ ಅನಾಮಧೇಯ ಕರೆ ಮೇರೆಗೆ ಅಬಕಾರಿ ಇಲಾಖೆ ಉಪಾಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಲೆಕ್ಕಪುಸ್ತಕಗಳಿಗೂ ದಾಸ್ತಾನಿಗೆ ಹೋಲಿಕೆ ಆಗದ ಹಿನ್ನಲೆ ಕಚ್ಚಾವಸ್ತುಗಳನ್ನ ಜಪ್ತಿ ಮಾಡಲಾಗಿದೆ.7000 ವಿವಿದ ಬ್ರಾಂಡಿನ ರೆಟ್ಟಿನಪೆಟ್ಟಿಗೆಗಳ ಬಿಯರ್ ದಾಸ್ತಾನು,6,03,644 ರೆಟ್ಟಿನಪೆಟ್ಟಿಗೆಗಳು,ಕೆಗ್ ಗಳಲ್ಲಿ 23,160 ಲೀಟರ್,ಬಿಬಿಟಿ ಟ್ಯಾಂಕ್ ನಲ್ಲಿ 5,16,700 ಲೀಟರ್,ಯು.ಟಿ.ಟ್ಯಾಂಕ್ ನಲ್ಲಿ 66,16,700 ಲೀಟರ್,ಸ್ಟೆಲೋಸ್ ಟ್ಯಾಂಕ್ ನಲ್ಲಿ 6,50,458 ಕೆಜಿ ಕಚ್ಚಾವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.ಜಪ್ಪಿಯಾದ ಒಟ್ಟು ಪದಾರ್ಥಗಳ ಮೌಲ್ಯ 98.52 ಕೋಟಿ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.ನಾಪತ್ತೆಯಾದ 17 ಆರೋಪಿಗಳ ಪತ್ತೆಗೆ ಚಾಮರಾಜನಗರ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.ಒಟ್ಟಾರೆ ಅಬಕಾರಿ ಇಲಾಖೆಯ ಭರ್ಜರಿ ಬೇಟೆ ಇದಾಗಿದೆ…