ಬಾಡಿಗೆಗೆ ಕಾರು ಪಡೆದು ಗಿರವಿ ಇಟ್ಟ ಭೂಪರು…ಮನನೊಂದ ಮಾಲೀಕ ನೇಣಿಗೆ ಶರಣು…ಡೆತ್ ನೋಟ್ ಬರೆದು ಆತ್ಮಹತ್ಯೆ…

ಬಾಡಿಗೆಗೆ ಕಾರು ಪಡೆದು ಗಿರವಿ ಇಟ್ಟ ಭೂಪರು…ಮನನೊಂದ ಮಾಲೀಕ ನೇಣಿಗೆ ಶರಣು…ಡೆತ್ ನೋಟ್ ಬರೆದು ಆತ್ಮಹತ್ಯೆ…

ಮೈಸೂರು,ಏ5,Tv10 ಕನ್ನಡ

ಬಾಡಿಗೆಗೆ ಕಾರ್ ಪಡೆದ ಭೂಪರು ಗಿರವಿ ಇಟ್ಟ ಹಿನ್ನಲೆ ಮನನೊಂದ ಕಾರ್ ಮಾಲೀಕ ಡೆತ್ ನೋಟ್ ಬರೆದು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ.ಮುಜಾಹಿದ್ ಪಾಷಾ ಮೃತ ದುರ್ದೈವಿ.ಪತಿಯ ಸಾವಿಗೆ ಕಾರಣರಾದ ಅಸ್ಗರ್ ಪಾಷಾ ಹಾಗೂ ಸಲ್ಲು ಎಂಬುವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮೃತನ ಪತ್ನಿ ಆಸ್ಮಾ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಾರು ಬಾಡಿಗೆ ಕೊಡುವ ವೃತ್ತಿಯಲ್ಲಿದ್ದ ಮುಜಾಹಿದ ಪಾಷಾ ತಮ್ಮ ಇನೋವಾ ಕಾರನ್ನ ಅಸ್ಗರ್ ಪಾಷಾ ಹಾಗೂ ಸಲ್ಲುಗೆ ಬಾಡಿಗೆಗಾಗಿ ನೀಡಿದ್ದಾರೆ.ಅಲ್ಲದೆ ಸ್ವಲ್ಪ ಸಾಲದ ಹಣವನ್ನೂ ಸಹ ನೀಡಿದ್ದಾರೆ.ಬಾಡಿಗೆಗೆ ಪಡೆದ ಕಾರನ್ನ ಅಸ್ಗರ್ ಪಾಷಾ ಹಾಗೂ ಸಲ್ಲು ರವರು ಗಿರವಿ ಇಟ್ಟಿದ್ದಾರೆ.ಜೊತೆಗೆ ಸಾಲದ ಹಣವನ್ನೂ ಸಹ ಹಿಂದಿರುಗಿಸದೆ ವಂಚಿಸಿದ್ದಾರೆ.ಇದರಿಂದ ಮನನೊಂದಿದ್ದ ಮುಜಾಹಿದ್ ಪಾಷಾ ಪತ್ನಿಯ ಜೊತೆ ತಮ್ಮ ನೋವನ್ನ ಹಂಚಿಕೊಂಡಿದ್ದಾರೆ.ರಂಜಾನ್ ಹಬ್ಬದ ಹಿನ್ನಲೆ ಮಕ್ಕಳಿಗೆ ಬಟ್ಟೆ ತರುವಂತೆ ಪತ್ನಿಗೆ ಹಣ ಕೊಟ್ಟು ಕಳುಹಿಸಿದ ಮುಜಾಹಿದ್ ಪಾಷಾ ತಮ್ಮ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಪತಿಯ ಸಾವಿಗೆ ಅಸ್ಗರ್ ಪಾಷಾ ಹಾಗೂ ಸಲ್ಲು ರವರೇ ಕಾರಣವೆಂದು ಆರೋಪಿಸಿರುವ ಪತ್ನಿ ಆಸ್ಮಾ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *