ಬಾಡಿಗೆಗೆ ಕಾರು ಪಡೆದು ಗಿರವಿ ಇಟ್ಟ ಭೂಪರು…ಮನನೊಂದ ಮಾಲೀಕ ನೇಣಿಗೆ ಶರಣು…ಡೆತ್ ನೋಟ್ ಬರೆದು ಆತ್ಮಹತ್ಯೆ…

ಬಾಡಿಗೆಗೆ ಕಾರು ಪಡೆದು ಗಿರವಿ ಇಟ್ಟ ಭೂಪರು…ಮನನೊಂದ ಮಾಲೀಕ ನೇಣಿಗೆ ಶರಣು…ಡೆತ್ ನೋಟ್ ಬರೆದು ಆತ್ಮಹತ್ಯೆ…

ಮೈಸೂರು,ಏ5,Tv10 ಕನ್ನಡ

ಬಾಡಿಗೆಗೆ ಕಾರ್ ಪಡೆದ ಭೂಪರು ಗಿರವಿ ಇಟ್ಟ ಹಿನ್ನಲೆ ಮನನೊಂದ ಕಾರ್ ಮಾಲೀಕ ಡೆತ್ ನೋಟ್ ಬರೆದು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ.ಮುಜಾಹಿದ್ ಪಾಷಾ ಮೃತ ದುರ್ದೈವಿ.ಪತಿಯ ಸಾವಿಗೆ ಕಾರಣರಾದ ಅಸ್ಗರ್ ಪಾಷಾ ಹಾಗೂ ಸಲ್ಲು ಎಂಬುವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮೃತನ ಪತ್ನಿ ಆಸ್ಮಾ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಾರು ಬಾಡಿಗೆ ಕೊಡುವ ವೃತ್ತಿಯಲ್ಲಿದ್ದ ಮುಜಾಹಿದ ಪಾಷಾ ತಮ್ಮ ಇನೋವಾ ಕಾರನ್ನ ಅಸ್ಗರ್ ಪಾಷಾ ಹಾಗೂ ಸಲ್ಲುಗೆ ಬಾಡಿಗೆಗಾಗಿ ನೀಡಿದ್ದಾರೆ.ಅಲ್ಲದೆ ಸ್ವಲ್ಪ ಸಾಲದ ಹಣವನ್ನೂ ಸಹ ನೀಡಿದ್ದಾರೆ.ಬಾಡಿಗೆಗೆ ಪಡೆದ ಕಾರನ್ನ ಅಸ್ಗರ್ ಪಾಷಾ ಹಾಗೂ ಸಲ್ಲು ರವರು ಗಿರವಿ ಇಟ್ಟಿದ್ದಾರೆ.ಜೊತೆಗೆ ಸಾಲದ ಹಣವನ್ನೂ ಸಹ ಹಿಂದಿರುಗಿಸದೆ ವಂಚಿಸಿದ್ದಾರೆ.ಇದರಿಂದ ಮನನೊಂದಿದ್ದ ಮುಜಾಹಿದ್ ಪಾಷಾ ಪತ್ನಿಯ ಜೊತೆ ತಮ್ಮ ನೋವನ್ನ ಹಂಚಿಕೊಂಡಿದ್ದಾರೆ.ರಂಜಾನ್ ಹಬ್ಬದ ಹಿನ್ನಲೆ ಮಕ್ಕಳಿಗೆ ಬಟ್ಟೆ ತರುವಂತೆ ಪತ್ನಿಗೆ ಹಣ ಕೊಟ್ಟು ಕಳುಹಿಸಿದ ಮುಜಾಹಿದ್ ಪಾಷಾ ತಮ್ಮ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಪತಿಯ ಸಾವಿಗೆ ಅಸ್ಗರ್ ಪಾಷಾ ಹಾಗೂ ಸಲ್ಲು ರವರೇ ಕಾರಣವೆಂದು ಆರೋಪಿಸಿರುವ ಪತ್ನಿ ಆಸ್ಮಾ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *