ಯದುವೀರ್ ಪರ ಶಾಸಕ ಶ್ರೀವತ್ಸ ಪ್ರಚಾರ…ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ಯದುವೀರ್ ಪರ ಶಾಸಕ ಶ್ರೀವತ್ಸ ಪ್ರಚಾರ…ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ಮೈಸೂರು,ಏ7,Tv10 ಕನ್ನಡ

ಲೋಕಸಭಾ ಚುನಾವಣೆ ಕಾವು ದಿನೇ ದಿನೇ ಏರುತ್ತಿದೆ.ಅಭ್ಯರ್ಥಿಗಳ ಪರ ಪಕ್ಷದ ಮುಖಂಡರುಗಳು ಮನೆ ಮನೆ ಬಾಗಿಲು ತಟ್ಟಿ ಮತಯಾಚನೆ ಮಾಡುತ್ತಿದ್ದಾರೆ.ಮೈಸೂರಿನ ವಿದ್ಯಾರಣ್ಯಪುರಂ ನಲ್ಲಿ ಶಾಸಕ ಶ್ರೀವತ್ಸ ಮೈಸೂರು ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿಯಾದ ಯದುವೀರ್ ಒಡೆಯರ್ ಅವರ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ನೀಡಿ ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರದ ಜೊತೆಗೆ ಮತಯಾಚಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಶ್ರೀವತ್ಸ
ದೇಶದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ವಿಶ್ವಮಟ್ಟದಲ್ಲಿ ಭಾರತವನ್ನು ವಿಶ್ವಗುರುನಾಗಿಸುವ ದೆಸೆಯಲ್ಲಿ ಪ್ರಧಾನಿ ಮೋದಿಯವರು ಕೈಗೊಂಡಿರುವ ರಾಜ ತಾಂತ್ರಿಕ ವಿಷಯಗಳಿಂದ ವಿಶ್ವದ ಬಲಿಷ್ಠ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಸ್ಥಾನ ಪಡೆದಿದೆ, ಅಲ್ಲದೆ ಮೋದಿವರ ಜನಪರ ಹಾಗೂ ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆ ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ, ಕೋಟ್ಯಂತರ ಜನರ ಆಶಯವಾಗಿದ್ದ ರಾಮ ಮಂದಿರ ನಿರ್ಮಾಣ ಸೇರಿ ಅನೇಕ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದರು.ಮತ್ತೆ ಮೋದಿ ಪ್ರದಾನಿಯಾಗಿಸಲು ಬಿಜೆಪಿ ಗೆ ನಿಮ್ಮ ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದರು…

ಈ ಸಂದರ್ಭದಲ್ಲಿ ಎಸಿ ಮೋರ್ಚಾ ಅಧ್ಯಕ್ಷರಾದ ವಿ ಶೈಲೇಂದ್ರ, ಮೈಸೂರು ನಗರ ಉಪಾಧ್ಯಕ್ಷ ಜೋಗಿ ಮಂಜು,ಮಾಜಿನಗರ ಪಾಲಿಕೆ ಸದಸ್ಯರಾದ ಪಾರ್ಥಸಾರಥಿ, ರಮೇಶ್, ಜಗದೀಶ್, ಕೆ ಆರ್ ಕ್ಷೇತ್ರದ ಅಧ್ಯಕ್ಷರಾದ ಗೋಪಾಲ್ ರಾಜ್ ಅರಸ್, ಜೆ ರವಿ, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್, ಜಗದೀಶ್, ಸಂದೀಪ್, ಧರ್ಮೇಂದ್ರ, ಶಿವಲಿಂಗ ಸ್ವಾಮಿ, ಹಾಗೂ ಸ್ಥಳಿಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *