ಯದುವೀರ್ ಪರ ಶಾಸಕ ಶ್ರೀವತ್ಸ ಪ್ರಚಾರ…ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ಯದುವೀರ್ ಪರ ಶಾಸಕ ಶ್ರೀವತ್ಸ ಪ್ರಚಾರ…ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ಮೈಸೂರು,ಏ7,Tv10 ಕನ್ನಡ

ಲೋಕಸಭಾ ಚುನಾವಣೆ ಕಾವು ದಿನೇ ದಿನೇ ಏರುತ್ತಿದೆ.ಅಭ್ಯರ್ಥಿಗಳ ಪರ ಪಕ್ಷದ ಮುಖಂಡರುಗಳು ಮನೆ ಮನೆ ಬಾಗಿಲು ತಟ್ಟಿ ಮತಯಾಚನೆ ಮಾಡುತ್ತಿದ್ದಾರೆ.ಮೈಸೂರಿನ ವಿದ್ಯಾರಣ್ಯಪುರಂ ನಲ್ಲಿ ಶಾಸಕ ಶ್ರೀವತ್ಸ ಮೈಸೂರು ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿಯಾದ ಯದುವೀರ್ ಒಡೆಯರ್ ಅವರ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ನೀಡಿ ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರದ ಜೊತೆಗೆ ಮತಯಾಚಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಶ್ರೀವತ್ಸ
ದೇಶದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ವಿಶ್ವಮಟ್ಟದಲ್ಲಿ ಭಾರತವನ್ನು ವಿಶ್ವಗುರುನಾಗಿಸುವ ದೆಸೆಯಲ್ಲಿ ಪ್ರಧಾನಿ ಮೋದಿಯವರು ಕೈಗೊಂಡಿರುವ ರಾಜ ತಾಂತ್ರಿಕ ವಿಷಯಗಳಿಂದ ವಿಶ್ವದ ಬಲಿಷ್ಠ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಸ್ಥಾನ ಪಡೆದಿದೆ, ಅಲ್ಲದೆ ಮೋದಿವರ ಜನಪರ ಹಾಗೂ ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆ ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ, ಕೋಟ್ಯಂತರ ಜನರ ಆಶಯವಾಗಿದ್ದ ರಾಮ ಮಂದಿರ ನಿರ್ಮಾಣ ಸೇರಿ ಅನೇಕ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದರು.ಮತ್ತೆ ಮೋದಿ ಪ್ರದಾನಿಯಾಗಿಸಲು ಬಿಜೆಪಿ ಗೆ ನಿಮ್ಮ ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದರು…

ಈ ಸಂದರ್ಭದಲ್ಲಿ ಎಸಿ ಮೋರ್ಚಾ ಅಧ್ಯಕ್ಷರಾದ ವಿ ಶೈಲೇಂದ್ರ, ಮೈಸೂರು ನಗರ ಉಪಾಧ್ಯಕ್ಷ ಜೋಗಿ ಮಂಜು,ಮಾಜಿನಗರ ಪಾಲಿಕೆ ಸದಸ್ಯರಾದ ಪಾರ್ಥಸಾರಥಿ, ರಮೇಶ್, ಜಗದೀಶ್, ಕೆ ಆರ್ ಕ್ಷೇತ್ರದ ಅಧ್ಯಕ್ಷರಾದ ಗೋಪಾಲ್ ರಾಜ್ ಅರಸ್, ಜೆ ರವಿ, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್, ಜಗದೀಶ್, ಸಂದೀಪ್, ಧರ್ಮೇಂದ್ರ, ಶಿವಲಿಂಗ ಸ್ವಾಮಿ, ಹಾಗೂ ಸ್ಥಳಿಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *