ಚೆಪ್ಪಲಿಯಲ್ಲಿ ಸಿಮ್ ಕಾರ್ಡ್,ಮೆಮೋರಿ ಕಾರ್ಡ್ ಪತ್ತೆ…ಕಾರಾಗೃಹಕ್ಕೆ ಎಂಟ್ರಿ ವೇಳೆ ಸಿಕ್ಕಿಬಿದ್ದ ವಿಚಾರಣಾಧೀನ ಖೈದಿ…

ಚೆಪ್ಪಲಿಯಲ್ಲಿ ಸಿಮ್ ಕಾರ್ಡ್,ಮೆಮೋರಿ ಕಾರ್ಡ್ ಪತ್ತೆ…ಕಾರಾಗೃಹಕ್ಕೆ ಎಂಟ್ರಿ ವೇಳೆ ಸಿಕ್ಕಿಬಿದ್ದ ವಿಚಾರಣಾಧೀನ ಖೈದಿ…

ಮೈಸೂರು,ಏ7,Tv10 ಕನ್ನಡ

ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ದಾಖಲಿಸಲು ಕರೆತಂದ ವಿಚಾರಣಾಧೀನ ಖೈದಿಯ ಚಪ್ಪಲಿಯಲ್ಲಿ ಒಂದು ಸಿಮ್ ಕಾರ್ಡ್ ಹಾಗೂ ಮೆಮೋರಿ ಕಾರ್ಡ್ ಮತ್ತು ಪ್ಯಾಂಟ್ ಒಳಜೇಬಿನಲ್ಲಿ ಒಂದು ಸಿಮ್ ಕಾರ್ಡ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.ದರೋಡೆ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದ ಆರೋಪಿಯನ್ನ ಕೇಂದ್ರ ಕಾರಾಗೃಹಕ್ಕೆ ದಾಖಲಿಸುವ ವೇಳೆ ಮುಖ್ಯ ಗೇಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ತಪಾಸಣೆಗೆ ಒಳಪಡಿಸಿದಾಗ ಐನಾತಿಯ ಬಣ್ಣ ಬಯಲಾಗಿದೆ.ವಿಚಾರಣಾಧೀನ ಖೈದಿ ಕಿರಣ್ ತಪಾಸಣೆ ವೇಳೆ ಸಿಕ್ಕಿಬಿದ್ದ ಐನಾತಿ.ತಾನು ಧರಿಸಿದ್ದ ಚಪ್ಪಲಿಯ ಹೊಲಿಗೆಯನ್ನ ಬಿಡಿಸಿ ನಂತರ ಸಿಮ್ ಕಾರ್ಡ್ ಹಾಗೂ ಮೆಮೋರಿ ಕಾರ್ಡ್ ಇಟ್ಟು ನಂತರ ಹೊಲಿಗೆ ಹಾಕಿಕೊಂಡು ಕಾರಾಗೃಹ ಪ್ರವೇಶಿಸುವ ವೇಳೆ ಸಿಕ್ಕಿಬಿದ್ದಿದ್ದಾನೆ.

ಲಷ್ಕರ್ ಪೊಲೀಸ್ ಠಾಣೆಯಲ್ಲಿ ಕಿರಣ್ ವಿರುದ್ದ ದರೋಡೆ ಪ್ರಕರಣ ಆರೋಪವಿತ್ತು.ಈ ಸಂಭಂಧ ಬಂಧಿಸಿದ್ದ ಲಷ್ಕರ್ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿತ್ತು.ಆರೋಪಿಯನ್ನ ಕಾರಾಗೃಹಕ್ಕೆ ದಾಖಲಿಸಲು ಲಷ್ಕರ್ ಠಾಣೆ ಸಿಬ್ಬಂದಿಗಳಾದ ಚಿನ್ನಪ್ಪ ಕಲ್ಲೊಳ್ಳಿ ಹಾಗೂ ಮಂಜುನಾಥ್ ಕರೆತಂದಿದ್ದರು.ಎಂಟ್ರಿ ಕೊಡುವಾಗ ನಿಯಮಾನುಸಾರ ತಪಾಸಣೆ ನಡೆಸುವ ವೇಳೆ ಕಿರಣ್ ಸಿಮ್ ಕಾರ್ಡ್ ಹಾಗೂ ಮೆಮೋರಿ ಕಾರ್ಡ್ ಚಪ್ಪಲಿಯಲ್ಲಿ ಮರೆಮಾಚಿ ತಂದಿರುವುದು ಬೆಳಕಿಗೆ ಬಂದಿದೆ.ಎರಡು ಸಿಮ್ ಕಾರ್ಡ್ ಹಾಗೂ ಒಂದು ಮೆಮೋರಿ ಕಾರ್ಡ್ ವಶಪಡಿಸಿಕೊಂಡ ಕಾರಾಗೃಹ ಪೊಲೀಸರು ಈ ಸಂಭಂಧ ಕಿರಣ್ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *