ಪ್ಲೈಯಿಂಗ್ ಸ್ಕ್ವಾಡ್ ಗೆ ಯಾಮಾರಿಸಿ ಹಣ ಸುಲಿಯುವ ಯತ್ನ…ಪೊಲೀಸರ ಸೋಗಿನಲ್ಲಿ ಖದೀಮರ ಕೈಚಳಕ…ಓರ್ವ ಅಂದರ್…ಇಬ್ಬರು ಪರಾರಿ…

ಪ್ಲೈಯಿಂಗ್ ಸ್ಕ್ವಾಡ್ ಗೆ ಯಾಮಾರಿಸಿ ಹಣ ಸುಲಿಯುವ ಯತ್ನ…ಪೊಲೀಸರ ಸೋಗಿನಲ್ಲಿ ಖದೀಮರ ಕೈಚಳಕ…ಓರ್ವ ಅಂದರ್…ಇಬ್ಬರು ಪರಾರಿ…

ಮೈಸೂರು,ಏ7,Tv10 ಕನ್ನಡ

ಚುನಾವಣೆ ಹಿನ್ನಲೆ ವಾಹನ ತಪಾಸಣೆ ನಡೆಸುವ ಸೋಗಿನಲ್ಲಿ ಮೂವರು ಯುವಕರು ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳನ್ನೇ ಯಾಮಾರಿಸಿ ಹಣ ಸುಲಿಯಲು ಯತ್ನಿಸಿದ ಘಟನೆ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.ಮೂವರು ಯುವಕರ ಓರ್ವ ಸಿಕ್ಕಿಬಿದ್ದಿದ್ದು ಮತ್ತಿಬ್ಬರು ಯುವಕರು ಪರಾರಿಯಾಗಿದ್ದಾರೆ.ಯರಗನಹಳ್ಳಿ ನಿವಾಸಿ ಮಾದೇಗೌಡ.@.ಮಧು ಬಂಧಿತ ಆರೋಪಿಯಾಗಿದ್ದು ಉಳಿದ ಇಬ್ಬರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

ಏ.4 ರ ಮಧ್ಯ ರಾತ್ರಿ ಫ್ಲೈಯಿಂಗ್ ಸ್ಕ್ವಾಡ್ 3 ರ ತಂಡದಲ್ಲಿ PWD ಎಇ ಕಾರ್ಯಪ್ಪ,SDA ಮಹದೇವ್,ಚಾಲಕ ಲಿಖಿನ್ ಹಾಗೂ ಮೇಟಗಳ್ಳಿ ಠಾಣೆಯ ಪೇದೆ ಶಶಿಕುಮಾರ್ ಕರ್ತವ್ಯದಲ್ಲಿದ್ದು ಕಾರಿನಲ್ಲಿ ಸಾತಗಳ್ಳಿ ಬಸ್ ಡಿಪೋ ಕಡೆಯಿಂದ ದೇವೇಗೌಡ ಸರ್ಕಲ್ ನತ್ತ ಬರುತ್ತಿದ್ದ ವೇಳೆ ಮೂವರು ಯುವಕರು ಬೈಕ್ ಅಡ್ಡ ನಿಲ್ಲಿಸಿ ಚುನಾವಣೆ ಹಿನ್ನಲೆ ಪೊಲೀಸರ ಅಣತಿಯಂತೆ ವಾಹನಗಳನ್ನ ತಪಾಸಣೆ ಮಾಡುತ್ತಿದ್ದೇವೆ ಹಣ ಇದ್ದರೆ ಕೊಟ್ಟುಬಿಡಿ ಎಂದು ಧಂಕಿ ಹಾಕಿದ್ದಾರೆ.ಹಣ ಕೊಡದಿದ್ದಲ್ಲಿ ಜೀವಸಹಿತ ಮುಂದೆ ಹೋಗಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.ಈ ವೇಳೆ ಬ್ಯಾಕ್ ಸೀಟ್ ನಲ್ಲಿ ಕುಳಿತಿದ್ದ ಪೇದೆ ಶಶಿಕುಮಾರ್ ಇಳಿದು ಬಂದು ಯಾವ ಠಾಣೆ ಪೊಲೀಸರು ಕಳಿಸಿದ್ದಾರೆ ಎಂದು ಪ್ರಶ್ನಿಸಿದಾಗ ಓಡಿಹೋಗಲು ಯತ್ನಿಸಿದ್ದಾರೆ.ಈ ವೇಳೆ ಮಾದೇಗೌಡ ಸಿಕ್ಕಿಬಿದ್ದಿದ್ದಾನೆ.ಮತ್ತಿಬ್ಬರು ಪರಾರಿಯಾಗಿದ್ದಾರೆ.ವಶಕ್ಕೆ ಪಡೆದ ಆರೋಪಿ ಮಾದೇಗೌಡ ನ್ನ ಆಲನಹಳ್ಳಿ ಠಾಣೆ ಪೊಲೀಸರ ವಶಕ್ಕೆ ನೀಡಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *