ನಿಮ್ಮ ಮೊಬೈಲ್,ಆಧಾರ್ ಕಾರ್ಡ್ ದುರ್ಬಳಕೆ ಆಗ್ತಿದೆ ಅಂತ ಕರೆ ಬಂದ್ರೆ ಹುಷಾರ್…ಲಕ್ಷಾಂತರ ಹಣಕ್ಕೆ ಉಂಡೆನಾಮ ಗ್ಯಾರೆಂಟಿ…

ನಿಮ್ಮ ಮೊಬೈಲ್,ಆಧಾರ್ ಕಾರ್ಡ್ ದುರ್ಬಳಕೆ ಆಗ್ತಿದೆ ಅಂತ ಕರೆ ಬಂದ್ರೆ ಹುಷಾರ್…ಲಕ್ಷಾಂತರ ಹಣಕ್ಕೆ ಉಂಡೆನಾಮ ಗ್ಯಾರೆಂಟಿ…

ಮೈಸೂರು,ಏ7,Tv10 ಕನ್ನಡ

ನಿಮ್ಮ ಮೊಬೈಲ್ ಮತ್ತು ಆಧಾರ್ ಕಾರ್ಡ್ ದುರ್ಬಳಕೆ ಆಗುತ್ತಿದೆ,ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಕೆ ಆಗುತ್ತಿದೆ ಅಂತ ಅನಾಮಧೇಯ ಕರೆ ಬಂದ್ರೆ ಹುಷಾರಾಗಿರಿ.ಇತ್ತೀಚಿನ ದಿನಗಳಲ್ಲಿ ಇಂತಹ ಕಾರಣ ನೀಡಿ ಬೆದರಿಸಿ ಹಣ ಕೀಳುವ ಖದೀಮರು ಹೆಚ್ಚಾಗಿದ್ದಾರೆ.ಮೈಸೂರಿನಲ್ಲಿ ಕಳೆದೆರಡು ದಿನಗಳಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಮಾಯಕರು 24 ಲಕ್ಷ ರೂ ಕಳೆದುಕೊಂಡಿದ್ದಾರೆ.

ಮೊದಲ ಪ್ರಕರಣದಲ್ಲಿ ಜಯಲಕ್ಷ್ಮಿಪುರಂ ನ ನಿವಾಸಿ ಹೇಮಂತ್ ಎಂಬುವರು ಬರೋಬರಿ 12 ಲಕ್ಷ ಕಳೆದುಕೊಂಡಿದ್ದಾರೆ.ಅನಾಮಧೇಯ ವ್ಯಕ್ತಿಯೊಬ್ಬ FedEx ಸಿಬ್ಬಂದಿ ಎಂದು ಪರಿಚಯಿಸಿಕೊಂಡು ನಿಮ್ಮ ಮಗಳು USA ನಿಂದ ಕಳುಹಿಸಿದ ಪಾರ್ಸಲ್ ರಿಜೆಕ್ಟ್ ಆಗಿದೆ ಎಂದಿದ್ದಾನೆ.ನಂತರ ಮುಂಬೈ ಪೊಲೀಸ್ ಎಂದು ಮತ್ತೊಬ್ಬ ವ್ಯಕ್ತಿ ಮಾತನಾಡಿ ನಿಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಮನಿ ಲಾಂಡರಿಂಗ್ ಹಾಗೂ ಡ್ರಗ್ಸ್ ದಂಧೆಗೆ ಲಿಂಕ್ ಆಗಿದೆ ತನಿಖೆ ಮಾಡಬೇಕೆಂದು ಹೆದರಿಸಿದ್ದಾನೆ.ವಂಚಕನ ಮಾತುಗಳನ್ನ ನಂಬಿದ ಹೇಮಂತ್ ರವರು ಹಂತಹಂತವಾಗಿ ಆತ ಹೇಳಿದ ಬ್ಯಾಂಕ್ ಖಾತೆಗಳಿಗೆ 12 ಲಕ್ಷ ವರ್ಗಾಯಿಸಿ ಮೋಸ ಹೋಗಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ವಿಜಯನಗರ ನಿವಾಸಿ ರಾಮಕೃಷ್ಣ ಎಂಬುವರು 12.18 ಲಕ್ಷ ಕಳೆದುಕೊಂಡಿದ್ದಾರೆ.ನಿಮ್ಮ ಮೊಬೈಲ್ ಸಂಖ್ಯೆ ಕಾನೂನು ಬಾಹಿರ ಚಟುವಟಿಕೆಗೆ ಬಳಕೆಯಾಗಿದೆ ಒಂದು ಗಂಟೆಯಲ್ಲಿ ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ.ಮೊಬೈಲ್ ಸಂಖ್ಯೆ ನನ್ನದಲ್ಲ ಎಂದು ಹೇಳಿದ್ರೂ ಆಧಾರ್ ಕಾರ್ಡ್ ಗೆ ಲಿಂಕ್ ಆಗಿ ನಿಮ್ಮ ಬ್ಯಾಂಕ್ ಖಾತೆಗಳು ಮನಿ ಲಾಂಡರಿಂಗ್ ಗೆ ಬಳಕೆಯಾಗಿದೆ ಈ ವಿಚಾರದಲ್ಲಿ ನಿಮ್ಮನ್ನ ಅರೆಸ್ಟ್ ಮಾಡುವುದಾಗಿ ಹೆದರಿಸಿದ್ದಾನೆ.ಈತನ ಬೆದರಿಕೆಗೆ ಹೆದರಿ ರಾಮಕೃಷ್ಣ ರವರು 12.18 ಲಕ್ಷ ವಿವಿದ ಖಾತೆಗಳಿಂದ ವರ್ಗಾಯಿಸಿದ್ದಾರೆ.ಮೂರು ದಿನಗಳಲ್ಲಿ ನಿಮ್ಮ ಹಣ ನಿಮ್ಮ ಖಾತೆಗೆ ವರ್ಗಾಯಿಸಲಾಗುತ್ತದೆ ಎಂದು ನಂಬಿಸಿ ವಂಚಿಸಿದ್ದಾರೆ.ಎರಡೂ ಪ್ರಕರಣಗಳು ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *