ನಿಮ್ಮ ಮೊಬೈಲ್,ಆಧಾರ್ ಕಾರ್ಡ್ ದುರ್ಬಳಕೆ ಆಗ್ತಿದೆ ಅಂತ ಕರೆ ಬಂದ್ರೆ ಹುಷಾರ್…ಲಕ್ಷಾಂತರ ಹಣಕ್ಕೆ ಉಂಡೆನಾಮ ಗ್ಯಾರೆಂಟಿ…

ನಿಮ್ಮ ಮೊಬೈಲ್,ಆಧಾರ್ ಕಾರ್ಡ್ ದುರ್ಬಳಕೆ ಆಗ್ತಿದೆ ಅಂತ ಕರೆ ಬಂದ್ರೆ ಹುಷಾರ್…ಲಕ್ಷಾಂತರ ಹಣಕ್ಕೆ ಉಂಡೆನಾಮ ಗ್ಯಾರೆಂಟಿ…

ಮೈಸೂರು,ಏ7,Tv10 ಕನ್ನಡ

ನಿಮ್ಮ ಮೊಬೈಲ್ ಮತ್ತು ಆಧಾರ್ ಕಾರ್ಡ್ ದುರ್ಬಳಕೆ ಆಗುತ್ತಿದೆ,ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಕೆ ಆಗುತ್ತಿದೆ ಅಂತ ಅನಾಮಧೇಯ ಕರೆ ಬಂದ್ರೆ ಹುಷಾರಾಗಿರಿ.ಇತ್ತೀಚಿನ ದಿನಗಳಲ್ಲಿ ಇಂತಹ ಕಾರಣ ನೀಡಿ ಬೆದರಿಸಿ ಹಣ ಕೀಳುವ ಖದೀಮರು ಹೆಚ್ಚಾಗಿದ್ದಾರೆ.ಮೈಸೂರಿನಲ್ಲಿ ಕಳೆದೆರಡು ದಿನಗಳಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಮಾಯಕರು 24 ಲಕ್ಷ ರೂ ಕಳೆದುಕೊಂಡಿದ್ದಾರೆ.

ಮೊದಲ ಪ್ರಕರಣದಲ್ಲಿ ಜಯಲಕ್ಷ್ಮಿಪುರಂ ನ ನಿವಾಸಿ ಹೇಮಂತ್ ಎಂಬುವರು ಬರೋಬರಿ 12 ಲಕ್ಷ ಕಳೆದುಕೊಂಡಿದ್ದಾರೆ.ಅನಾಮಧೇಯ ವ್ಯಕ್ತಿಯೊಬ್ಬ FedEx ಸಿಬ್ಬಂದಿ ಎಂದು ಪರಿಚಯಿಸಿಕೊಂಡು ನಿಮ್ಮ ಮಗಳು USA ನಿಂದ ಕಳುಹಿಸಿದ ಪಾರ್ಸಲ್ ರಿಜೆಕ್ಟ್ ಆಗಿದೆ ಎಂದಿದ್ದಾನೆ.ನಂತರ ಮುಂಬೈ ಪೊಲೀಸ್ ಎಂದು ಮತ್ತೊಬ್ಬ ವ್ಯಕ್ತಿ ಮಾತನಾಡಿ ನಿಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಮನಿ ಲಾಂಡರಿಂಗ್ ಹಾಗೂ ಡ್ರಗ್ಸ್ ದಂಧೆಗೆ ಲಿಂಕ್ ಆಗಿದೆ ತನಿಖೆ ಮಾಡಬೇಕೆಂದು ಹೆದರಿಸಿದ್ದಾನೆ.ವಂಚಕನ ಮಾತುಗಳನ್ನ ನಂಬಿದ ಹೇಮಂತ್ ರವರು ಹಂತಹಂತವಾಗಿ ಆತ ಹೇಳಿದ ಬ್ಯಾಂಕ್ ಖಾತೆಗಳಿಗೆ 12 ಲಕ್ಷ ವರ್ಗಾಯಿಸಿ ಮೋಸ ಹೋಗಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ವಿಜಯನಗರ ನಿವಾಸಿ ರಾಮಕೃಷ್ಣ ಎಂಬುವರು 12.18 ಲಕ್ಷ ಕಳೆದುಕೊಂಡಿದ್ದಾರೆ.ನಿಮ್ಮ ಮೊಬೈಲ್ ಸಂಖ್ಯೆ ಕಾನೂನು ಬಾಹಿರ ಚಟುವಟಿಕೆಗೆ ಬಳಕೆಯಾಗಿದೆ ಒಂದು ಗಂಟೆಯಲ್ಲಿ ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ.ಮೊಬೈಲ್ ಸಂಖ್ಯೆ ನನ್ನದಲ್ಲ ಎಂದು ಹೇಳಿದ್ರೂ ಆಧಾರ್ ಕಾರ್ಡ್ ಗೆ ಲಿಂಕ್ ಆಗಿ ನಿಮ್ಮ ಬ್ಯಾಂಕ್ ಖಾತೆಗಳು ಮನಿ ಲಾಂಡರಿಂಗ್ ಗೆ ಬಳಕೆಯಾಗಿದೆ ಈ ವಿಚಾರದಲ್ಲಿ ನಿಮ್ಮನ್ನ ಅರೆಸ್ಟ್ ಮಾಡುವುದಾಗಿ ಹೆದರಿಸಿದ್ದಾನೆ.ಈತನ ಬೆದರಿಕೆಗೆ ಹೆದರಿ ರಾಮಕೃಷ್ಣ ರವರು 12.18 ಲಕ್ಷ ವಿವಿದ ಖಾತೆಗಳಿಂದ ವರ್ಗಾಯಿಸಿದ್ದಾರೆ.ಮೂರು ದಿನಗಳಲ್ಲಿ ನಿಮ್ಮ ಹಣ ನಿಮ್ಮ ಖಾತೆಗೆ ವರ್ಗಾಯಿಸಲಾಗುತ್ತದೆ ಎಂದು ನಂಬಿಸಿ ವಂಚಿಸಿದ್ದಾರೆ.ಎರಡೂ ಪ್ರಕರಣಗಳು ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *