ನಿಮ್ಮ ಮೊಬೈಲ್,ಆಧಾರ್ ಕಾರ್ಡ್ ದುರ್ಬಳಕೆ ಆಗ್ತಿದೆ ಅಂತ ಕರೆ ಬಂದ್ರೆ ಹುಷಾರ್…ಲಕ್ಷಾಂತರ ಹಣಕ್ಕೆ ಉಂಡೆನಾಮ ಗ್ಯಾರೆಂಟಿ…

ನಿಮ್ಮ ಮೊಬೈಲ್,ಆಧಾರ್ ಕಾರ್ಡ್ ದುರ್ಬಳಕೆ ಆಗ್ತಿದೆ ಅಂತ ಕರೆ ಬಂದ್ರೆ ಹುಷಾರ್…ಲಕ್ಷಾಂತರ ಹಣಕ್ಕೆ ಉಂಡೆನಾಮ ಗ್ಯಾರೆಂಟಿ…

ಮೈಸೂರು,ಏ7,Tv10 ಕನ್ನಡ

ನಿಮ್ಮ ಮೊಬೈಲ್ ಮತ್ತು ಆಧಾರ್ ಕಾರ್ಡ್ ದುರ್ಬಳಕೆ ಆಗುತ್ತಿದೆ,ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಕೆ ಆಗುತ್ತಿದೆ ಅಂತ ಅನಾಮಧೇಯ ಕರೆ ಬಂದ್ರೆ ಹುಷಾರಾಗಿರಿ.ಇತ್ತೀಚಿನ ದಿನಗಳಲ್ಲಿ ಇಂತಹ ಕಾರಣ ನೀಡಿ ಬೆದರಿಸಿ ಹಣ ಕೀಳುವ ಖದೀಮರು ಹೆಚ್ಚಾಗಿದ್ದಾರೆ.ಮೈಸೂರಿನಲ್ಲಿ ಕಳೆದೆರಡು ದಿನಗಳಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಮಾಯಕರು 24 ಲಕ್ಷ ರೂ ಕಳೆದುಕೊಂಡಿದ್ದಾರೆ.

ಮೊದಲ ಪ್ರಕರಣದಲ್ಲಿ ಜಯಲಕ್ಷ್ಮಿಪುರಂ ನ ನಿವಾಸಿ ಹೇಮಂತ್ ಎಂಬುವರು ಬರೋಬರಿ 12 ಲಕ್ಷ ಕಳೆದುಕೊಂಡಿದ್ದಾರೆ.ಅನಾಮಧೇಯ ವ್ಯಕ್ತಿಯೊಬ್ಬ FedEx ಸಿಬ್ಬಂದಿ ಎಂದು ಪರಿಚಯಿಸಿಕೊಂಡು ನಿಮ್ಮ ಮಗಳು USA ನಿಂದ ಕಳುಹಿಸಿದ ಪಾರ್ಸಲ್ ರಿಜೆಕ್ಟ್ ಆಗಿದೆ ಎಂದಿದ್ದಾನೆ.ನಂತರ ಮುಂಬೈ ಪೊಲೀಸ್ ಎಂದು ಮತ್ತೊಬ್ಬ ವ್ಯಕ್ತಿ ಮಾತನಾಡಿ ನಿಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಮನಿ ಲಾಂಡರಿಂಗ್ ಹಾಗೂ ಡ್ರಗ್ಸ್ ದಂಧೆಗೆ ಲಿಂಕ್ ಆಗಿದೆ ತನಿಖೆ ಮಾಡಬೇಕೆಂದು ಹೆದರಿಸಿದ್ದಾನೆ.ವಂಚಕನ ಮಾತುಗಳನ್ನ ನಂಬಿದ ಹೇಮಂತ್ ರವರು ಹಂತಹಂತವಾಗಿ ಆತ ಹೇಳಿದ ಬ್ಯಾಂಕ್ ಖಾತೆಗಳಿಗೆ 12 ಲಕ್ಷ ವರ್ಗಾಯಿಸಿ ಮೋಸ ಹೋಗಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ವಿಜಯನಗರ ನಿವಾಸಿ ರಾಮಕೃಷ್ಣ ಎಂಬುವರು 12.18 ಲಕ್ಷ ಕಳೆದುಕೊಂಡಿದ್ದಾರೆ.ನಿಮ್ಮ ಮೊಬೈಲ್ ಸಂಖ್ಯೆ ಕಾನೂನು ಬಾಹಿರ ಚಟುವಟಿಕೆಗೆ ಬಳಕೆಯಾಗಿದೆ ಒಂದು ಗಂಟೆಯಲ್ಲಿ ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ.ಮೊಬೈಲ್ ಸಂಖ್ಯೆ ನನ್ನದಲ್ಲ ಎಂದು ಹೇಳಿದ್ರೂ ಆಧಾರ್ ಕಾರ್ಡ್ ಗೆ ಲಿಂಕ್ ಆಗಿ ನಿಮ್ಮ ಬ್ಯಾಂಕ್ ಖಾತೆಗಳು ಮನಿ ಲಾಂಡರಿಂಗ್ ಗೆ ಬಳಕೆಯಾಗಿದೆ ಈ ವಿಚಾರದಲ್ಲಿ ನಿಮ್ಮನ್ನ ಅರೆಸ್ಟ್ ಮಾಡುವುದಾಗಿ ಹೆದರಿಸಿದ್ದಾನೆ.ಈತನ ಬೆದರಿಕೆಗೆ ಹೆದರಿ ರಾಮಕೃಷ್ಣ ರವರು 12.18 ಲಕ್ಷ ವಿವಿದ ಖಾತೆಗಳಿಂದ ವರ್ಗಾಯಿಸಿದ್ದಾರೆ.ಮೂರು ದಿನಗಳಲ್ಲಿ ನಿಮ್ಮ ಹಣ ನಿಮ್ಮ ಖಾತೆಗೆ ವರ್ಗಾಯಿಸಲಾಗುತ್ತದೆ ಎಂದು ನಂಬಿಸಿ ವಂಚಿಸಿದ್ದಾರೆ.ಎರಡೂ ಪ್ರಕರಣಗಳು ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ…

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *