ಪಬ್ಲಿಕ್ ಪ್ರಾಸಿಕ್ಯೂಟರ್ ಮೇಲೆ ಹಲ್ಲೆ…ವ್ಯಕ್ತಿ ವಿರುದ್ದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…
- TV10 Kannada Exclusive
- April 9, 2024
- No Comment
- 772
ಮೈಸೂರು,ಏ9,Tv10 ಕನ್ನಡ
ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವ ಕ್ರಿಮಿನಲ್ ಪ್ರಕರಣಗಳಿಗೆ ಸಂಭಂಧಿಸಿದಂತೆ ಕ್ಯಾತೆ ತೆಗೆದ ವ್ಯಕ್ತಿಯೋರ್ವ ಸರ್ಕಾರಿ ಅಭಿಯೋಜಕನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಕೆ.ಆರ್.ಠಾಣಾ ವ್ಯಾಪ್ತಿಯ ಬಸವೇಶ್ವರ ರಸ್ತೆಯಲ್ಲಿ ನಡೆದಿದೆ.ಪಿರಿಯಾಪಟ್ಟಣ ಹಾಗೂ ಹುಣಸೂರಿನಲ್ಲಿ ಪ್ರಭಾರ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪಬ್ಲಿಕ್ ಪ್ರಾಸಿಕ್ಯೂಟರ್ ಶಿವಪ್ರಸಾದ್ ಗಾಂವ್ಕರ್ ರವರೇ ಹಲ್ಲೆಗೆ ಒಳಗಾದವರು.ಕಿರಣ್ ಕೌಶಿಕ್ ಎಂಬಾತ ಹಲ್ಲೆ ನಡೆಸಿದ್ದು ಸದರಿ ವ್ಯಕ್ತಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಶಿಪ್ರಸಾದ್ ಗಾಂವ್ಕರ್ ಪ್ರಕರಣ ದಾಖಲಿಸಿದ್ದಾರೆ.
ಹುಣಸೂರಿನ ಅಧಿಕ ಸಿಜೆ ಮತ್ತು ಜೆ.ಎಂ.ಎಫ್.ಸಿ.ನ್ಯಾಯಾಲಯದಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ.ಈ ಪ್ರಕರಣದಲ್ಲಿ 12 ಮಂದಿ ಆರೋಪಿಗಳಾಗಿದ್ದಾರೆ.ಸದರಿ ಪ್ರಕರಣಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಕಿರಣ್ ಕೌಶಿಕ್ ಎಂಬಾತ ಶಿವಪ್ರಸಾದ್ ಗಾಂವ್ಕರ್ ರವರ ಮನೆ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ.ಆರೋಪಿಗಳ ಕುಮ್ಮಕ್ಕಿನಿಂದ ಕಿರಣ್ ಕೌಶಿಕ್ ಹಲ್ಲೆ ನಡೆಸಿರುವುದಾಗಿ ಆರೋಪಿಸಿರುವ ಪಬ್ಲಿಕ್ ಪ್ರಾಸಿಕ್ಯೂಟರ್ ಶಿವಪ್ರಸಾದ್ ಗಾಂವ್ಕರ್ ರವರು ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಜರುಗಿಸುವಂತೆ ದೂರಿನಲ್ಲಿ ದಾಖಲಿಸಿದ್ದಾರೆ…