ಮಂಡ್ಯ:ಹಳೇಧ್ವೇಷ ಹಿನ್ನಲೆ ರೌಡಿಶೀಟರ್ ಬರ್ಬರ ಕೊಲೆ…
- TV10 Kannada Exclusive
- April 10, 2024
- No Comment
- 202
ಮಂಡ್ಯ,ಏ10,Tv10 ಕನ್ನಡ
ಯುಗಾದಿ ದಿನದಂದೇ ಮಂಡ್ಯಾದಲ್ಲಿ ರೌಡಿ ಶೀಟರ್ ಬರ್ಬರ ಕೊಲೆಯಾಗಿದೆ. ಮಧ್ಯರಾತ್ರಿ ವೇಳೆ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ.
ಹಳೆ ದ್ವೇಷ ಹಿನ್ನಲೆ ಹತ್ಯೆ ನಡೆದಿದೆ ಎನ್ನಲಾಗಿದೆ.
ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿ ಘಟನೆ ನಡೆದಿದೆ.
ಅಕ್ಷಯ್( 24 )ಹತ್ಯೆಯಾದ ಯುವಕ.
ಫೋನ್ ಮಾಡಿ ಕರೆಸಿಕೊಂಡು ನಡು ಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ.
ಹಲವು ಪ್ರಕರಣಗಳಲ್ಕಿ ಭಾಗಿಯಾಗಿದ್ದ ಹಿನ್ನೆಲೆ ಅಕ್ಷಯ್ ವಿರುದ್ಧ ರೌಡಿಶೀಟರ್ ಪ್ರಕರಣ ತೆರೆಯಲಾಗಿತ್ತು.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…