ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಬೈಕ್ ಕಳ್ಳನ ಬಂಧನ…6.14 ಲಕ್ಷ ಮೌಲ್ಯದ 8 ಬೈಕ್ ಗಳು ವಶ…
- TV10 Kannada Exclusive
- April 10, 2024
- No Comment
- 497
ಮೈಸೂರು,ಏ10,Tv10 ಕನ್ನಡ
ಕುವೆಂಪುನಗರ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ಬೈಕ್ ಕಳುವು ಆರೋಪಿ ಸಿಕ್ಕಿಬಿದ್ದಿದ್ದಾನೆ.ಬಂಧಿತನಿಂದ 6.14 ಲಕ್ಷ ಮೌಲ್ಯದ 8 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಕಡಕೊಳ ನಿವಾಸಿ ರಂಗಸ್ವಾಮಿ(26) ಸಿಕ್ಕಿಬಿದ್ದ ಆರೋಪಿ.ಮೈಸೂರು,ಕೆ.ಆರ್.ಪೇಟೆ,ಬನ್ನೂರು,ನಂಜನಗೂಡು,ಮೈಸೂರು ಗ್ರಾಮಾಂತರ,ಬಿಳಿಕೆರೆ,ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವು ಮಾಡಿದ ಪ್ರಕರಣಗಳು ಪತ್ತೆಯಾದಂತಾಗಿದೆ.
ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಎಸ್.ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಕೆ.ಆರ್.ಎಸಿಪಿ ರಮೇಶ್ ಕುಮಾರ್ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆಯ ಇನ್ಸ್ಪೆಕ್ಟರ್ ಯೋಗೇಶ್ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಗೋಪಾಲ್,ಕು.ರಾಧ ಹಾಗೂ ಸಿಬ್ಬಂದಿಗಳಾದ ಮಂಜುನಾಥ್,ಆನಂದ್,ಹಜರತ್ ಆಲಿ,ಸುರೇಶ್,ನಾಗೇಶ್ ಹಾಗೂ ಸತೀಶ್ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಆರೋಪಿಯನ್ನ ಬಂಧಿಸುವಲ್ಲಿ ಶ್ರಮಿಸಿದ್ದಾರೆ.
ಈ ಪತ್ತೆ ಕಾರ್ಯವನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ರವರು ಶ್ಲಾಘಿಸಿದ್ದಾರೆ…