ಬಸ್ ತಂಗುದಾಣವನ್ನೇ ನುಂಗಿದ ಅಪಘಾತಕ್ಕೆ ಸಿಲುಕಿದ ವಾಹನ…ಕಣ್ಮುಚ್ಚಿ ಕುಳಿತ ಸಂಚಾರಿ ಪೊಲೀಸರು…

ಬಸ್ ತಂಗುದಾಣವನ್ನೇ ನುಂಗಿದ ಅಪಘಾತಕ್ಕೆ ಸಿಲುಕಿದ ವಾಹನ…ಕಣ್ಮುಚ್ಚಿ ಕುಳಿತ ಸಂಚಾರಿ ಪೊಲೀಸರು…

ಮೈಸೂರು,ಏ13,Tv10 ಕನ್ನಡ

ಅಪಘಾತಕ್ಕೆ ಸಿಲುಕಿ ನಜ್ಜುಗುಜ್ಜಾದ ಲಾರಿಯೊಂದು ಬಸ್ ತಂಗುದಾಣವನ್ನ ಆವರಿಸಿಕೊಂಡು ಬಸ್ ಗಾಗಿ ಕಾದುನಿಂತ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಮೈಸೂರಿನ ವಿವಿ ಪುರಂ ಸಂಚಾರಿ ಪೊಲೀಸ್ ಠಾಣೆ ಸಮೀಪವಿರುವ ಬಸ್ ತಂಗುದಾಣದ ಬಳಿ ಈ ದೃಶ್ಯ ಕಂಡು ಬಂದಿದೆ.ಬಸ್ ಪ್ರಯಾಣಿಕರು ಬಸ್ ಗಾಗಿ ಕಾಯುವ ಉದ್ದೇಶದಿಂದ ವಿವಿ ಪುರಂ ಸಂಚಾರಿ ಠಾಣೆ ಸಮೀಪ ಮೈಸೂರು ಮಹಾನಗರ ಪಾಲಿಕೆ ತಂಗುದಾಣ ನಿರ್ಮಿಸಿದೆ.ಆದರೆ ಈ ಬಸ್ ತಂಗುದಾಣವನ್ನ ಅಪಘಾತಕ್ಕೆ ಸಿಲುಕಿ ನಜ್ಜುಗುಜ್ಜಾದ ಲಾರಿ ಮುಚ್ಚಿಹಾಕಿದೆ.ಬಸ್ ಗಾಗಿ ತಂಗುದಾಣದಲ್ಲಿ ಇರಬೇಕಿದ್ದ ಪ್ರಯಾಣಿಕರು ಲಾರಿ ಅಡ್ಡನಿಂತ ಪರಿಣಾಮ ರಸ್ತೆ ಮೇಲೆ ಬಂದು ನಿಂತಿದ್ದಾರೆ.ಅಪಘಾತಕ್ಕೆ ಸಿಲುಕಿ ಪೊಲೀಸರ ವಶದಲ್ಲಿರುವ ವಾಹನಗಳನ್ನ ಪಾರ್ಕಿಂಗ್ ಮಾಡಲು ಠಾಣೆಯ ಹಿಂಭಾಗ ಸ್ಥಳ ಮೀಸಲಿದೆ.ಹೀಗಿದ್ದೂ ಅಪಘಾತಕ್ಕೆ ಸಿಲುಕಿ ಹಾನಿಯಾದ ಲಾರಿ ತಂಗುದಾಣದ ಮುಂಭಾಗ ನಿಲ್ಲಿಸಿ ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದಾರೆ.ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗುವ ವಾಹನಗಳನ್ನ ಧಿಢೀರ್ ಪ್ರತ್ಯಕ್ಷವಾಗಿ ಲಾಕ್ ಮಾಡಿ ದಂಡ ವಸೂಲಿ ಮಾಡುವ ಸಂಚಾರಿ ಪೊಲೀಸರಿಗೆ ಈ ಲಾರಿ ಉಂಟು ಮಾಡುತ್ತಿರುವ ಕಿರಿಕಿರಿ ಕಾಣಿಸುತ್ತಿಲ್ಲವೇ…?ಕೂಡಲೇ ಸಂಚಾರಿ ಪೊಲೀಸರು ಎಚ್ಚೆತ್ತು ಲಾರಿಯನ್ನ ತೆರುವುಗೊಳಿಸಿ ಬಸ್ ತಂಗುದಾಣಕ್ಕೆ ಮುಕ್ತಿ ನೀಡುವರೇ…?

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *