ಶ್ರೀನಿವಾಸ್ ಪ್ರಸಾದ್- ಸಿದ್ದು ಭೇಟಿ…ಮುನಿಸು ಮರೆತ ಉಭಯ ನಾಯಕರು…ನಮ್ಮ ಪಕ್ಷದ ಬಗ್ಗೆ ಸಿಂಪತಿ ಇರಲಿ ಎಂದ ಸಿಎಂ…

ಶ್ರೀನಿವಾಸ್ ಪ್ರಸಾದ್- ಸಿದ್ದು ಭೇಟಿ…ಮುನಿಸು ಮರೆತ ಉಭಯ ನಾಯಕರು…ನಮ್ಮ ಪಕ್ಷದ ಬಗ್ಗೆ ಸಿಂಪತಿ ಇರಲಿ ಎಂದ ಸಿಎಂ…

ಮೈಸೂರು,ಏ13,Tv10 ಕನ್ನಡ

ಕೊನೆಗೂ ಲೋಕಸಭಾ ಚುನಾವಣೆ ಇಬ್ಬರು ನಾಯಕರನ್ನ ಮುಖಾಮುಖಿ ಭೇಟಿ ಮಾಡಿಸುವ ವಾತಾವರಣ ಕಲ್ಪಿಸಿದೆ.ಕೆಲವು ರಾಜಕೀಯ ಬೆಳವಣಿಗೆ ಹಿನ್ನಲೆ ಆಪ್ತಸ್ನೇಹಿತರಾಗಿದ್ದ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್ ಇಬ್ಬರೂ ಮುನಿಸಿಕೊಂಡಿದ್ದರು.ಸುಮಾರು ಆರು ವರ್ಷಗಳ ಕಾಲ ಪರಸ್ಪರ ಹೇಳಿಕೆಗಳನ್ನ ನೀಡುವ ಮೂಲಕ ಬಹಿರಂಗವಾಗಿ ಕಿತ್ತಾಡಿದ್ದರು.ಇದೀಗ ಲೋಕಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆಯೇ ಮುನಿಸು ಮರೆತ ರಾಜಕೀಯ ದಿಗ್ಗಜರು ಭೇಟಿ ಮಾಡಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.ಇಂದು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.ಸುಮಾರು ಒಂದು ಗಂಟೆ ಕಾಲ ಮಾತನಾಡಿದ ನಾಯಕರು ಅಚ್ಚರಿ ಮೂಡಿಸಿದ್ದಾರೆ.ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಶ್ರೀನಿವಾಸ್ ಪ್ರಸಾದ್ ಅವರೊಂದಿಗೆ ನಾನು ಯಾವುದೇ ರಾಜಕೀಯ ವಿಷಯವನ್ನು ಪ್ರಸ್ತಾಪ ಮಾಡಿಲ್ಲ ಎಂದರು.
ಶ್ರೀನಿವಾಸ‌ ಪ್ರಸಾದ್ ಮತ್ತು ನಾನು ಬಹಳ ದೀರ್ಘಕಾಲದ ಸ್ನೇಹಿತರಾಗಿದ್ದವರು,ಆಪ್ತರಾಗಿದ್ದವರು,ಅವರ‌ ಆರೋಗ್ಯ ವಿಚಾರಿಸಲೆಂದು ಭೇಟಿ ಮಾಡಿದ್ದೇನೆ ಯಾವುದೇ ರಾಜಕೀಯ ವಿಷಯ ಮಾತನಾಡಿಲ್ಲ.
ಶ್ರೀನಿವಾಸ ಪ್ರಸಾದ್ ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದೇನೆ ಎಂದು ಘೋಷಿಸಿದ್ದಾರೆ.ಯಾವುದೇ ರಾಜಕೀಯ ಪಕ್ಷಕ್ಕೂ ಬೆಂಬಲವಿಲ್ಲ ತಟಸ್ಥ ವಾಗಿರುವುದಾಗಿ ಹೇಳಿದ್ದಾರೆ ಹಾಗಾಗಿ ನಾನು ರಾಜಕೀಯ ಮಾತನಾಡಲಿಲ್ಲಾ,ಆದರೆ ನಮ್ಮ ಪಕ್ಷದ ಬಗ್ಗೆ ಸಿಂಪತಿ ಇರಲಿ ಎಂದು ಮನವಿ ಮಾಡಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.ಲೋಕಸಭಾ ಚುನಾವಣೆ ಹೊತ್ತಲ್ಲಿ ಪ್ರತಿಷ್ಠೆಯನ್ನ ಬದಿಗೊತ್ತಿದ ಸಿದ್ದರಾಮಯ್ಯ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಲು ಮುಂದಾಗಿದ್ದಾರೆ.ತಮ್ಮ ತವರು ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಯ ಗೆಲುವಿಗಾಗಿ ಆಪ್ತಗೆಳೆಯನನ್ನ ಇಂದು ಭೇಟಿಯಾಗಿರುವುದು ಭಾರಿ ಚರ್ಚೆಗೂ ಗ್ರಾಸವಾಗುತ್ತಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *