ಚುನಾವಣಾ ಕರ್ತವ್ಯದಲ್ಲಿ ಲೋಪ…ಪಾಲಿಕೆ ಎಇಇ ಅಮಾನತು…ವಿದ್ಯುನ್ಮಾನ ಮತ ಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಆರೋಪ…

ಚುನಾವಣಾ ಕರ್ತವ್ಯದಲ್ಲಿ ಲೋಪ…ಪಾಲಿಕೆ ಎಇಇ ಅಮಾನತು…ವಿದ್ಯುನ್ಮಾನ ಮತ ಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಆರೋಪ…

ಮೈಸೂರು,ಏ13,Tv10 ಕನ್ನಡ

ಲೋಕಸಭೆ ಚುನಾವಣಾ ಕರ್ತವ್ಯಕ್ಕೆ ಸಂಭಂಧಿಸಿದಂತೆ ವಿದ್ಯುನ್ಮಾನ ಮತಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಮೈಸೂರು ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲ ಅಭಿಯಂತರರು ಹಾಗೂ ಸ್ಟ್ರಾಂಗ್ ರೂಂ ಮತ್ತು ಮ್ಯಾನ್ ಪವರ್ ನೂಡಲ್ ಅಧಿಕಾರಿ ರಾಜೀವ್ ನಾಥ್ ರನ್ನ ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವಿದ್ಯನ್ಮಾನ ಮತಯಂತ್ರಗಳ ವಾಹನವನ್ನ ಜೆ.ಎಸ್.ಎಸ್.ಕಲಾ ಮತ್ತು ವಿಜ್ಞಾನ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಇರಿಸುವ ಕರ್ತವ್ಯದಲ್ಲಿ ಲೋಪವೆಸಗಿರುವ ಆರೋಪದ ಹಿನ್ನಲೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.ಕಾಲೇಜಿನ ಆಡಳಿತಮಂಡಳಿ ಜೊತೆ ವ್ಯವಹರಿಸಿ ಮುಖ್ಯದ್ವಾರ ತೆರೆಸುವ ವ್ಯವಸ್ಥೆ ಮಾಡಿಲ್ಲ ಈ ಕಾರಣ ವಿದ್ಯುನ್ಮಾನ ಮತಯಂತ್ರಗಳಿದ್ದ ವಾಹನ ಸುಮಾರು ಅರ್ಧಗಂಟೆ ಕಾಲ ರಸ್ತೆಯಲ್ಲೇ ನಿಂತಿದೆ.ಅಲ್ಲದೆ ವಿದ್ಯುನ್ಮಾನ ಮತಯಂತ್ರಗಳನ್ನ ಸ್ಟ್ರಾಂಗ್ ರೂಂ ನಲ್ಲಿ ಶೇಖರಿಸಿಡಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದಿಲ್ಲ,ಸರಿಯಾದ ಸಮಯದಲ್ಲಿ ಮರದ ಬಾಗಿಲು ತೆರೆಸಲು ಕಾರ್ಪೆಂಟರ್ ಕರೆಸುವಲ್ಲೂ ವ್ಯವಸ್ಥೆ ಮಾಡಿಲ್ಲ,ವಿದ್ಯುನ್ಮಾನ ಮತಯಂತ್ರಗಳನ್ನ ಸಾಗಿಸುವಾಗಲೂ ಖುದ್ದು ಹಾಜರಿರುವುದಿಲ್ಲ.ಈ ಎಲ್ಲಾ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ರವರು ರಾಜೀವ್ ನಾಥ್ ರನ್ನ ಅಮಾನತ್ತಿನಲ್ಲಿಟ್ಟು ಇಲಾಖಾ ವಿಚಾರಣೆಗೆ ಆದೇಶಿಸಿದ್ದಾರೆ…

Spread the love

Related post

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ…

ಪಿರಿಯಾಪಟ್ಟಣ,ಮೇ16,Tv10 ಕನ್ನಡ ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್…
ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…
ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…

Leave a Reply

Your email address will not be published. Required fields are marked *