ಚುನಾವಣಾ ಕರ್ತವ್ಯದಲ್ಲಿ ಲೋಪ…ಪಾಲಿಕೆ ಎಇಇ ಅಮಾನತು…ವಿದ್ಯುನ್ಮಾನ ಮತ ಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಆರೋಪ…

ಚುನಾವಣಾ ಕರ್ತವ್ಯದಲ್ಲಿ ಲೋಪ…ಪಾಲಿಕೆ ಎಇಇ ಅಮಾನತು…ವಿದ್ಯುನ್ಮಾನ ಮತ ಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಆರೋಪ…

ಮೈಸೂರು,ಏ13,Tv10 ಕನ್ನಡ

ಲೋಕಸಭೆ ಚುನಾವಣಾ ಕರ್ತವ್ಯಕ್ಕೆ ಸಂಭಂಧಿಸಿದಂತೆ ವಿದ್ಯುನ್ಮಾನ ಮತಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಮೈಸೂರು ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲ ಅಭಿಯಂತರರು ಹಾಗೂ ಸ್ಟ್ರಾಂಗ್ ರೂಂ ಮತ್ತು ಮ್ಯಾನ್ ಪವರ್ ನೂಡಲ್ ಅಧಿಕಾರಿ ರಾಜೀವ್ ನಾಥ್ ರನ್ನ ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವಿದ್ಯನ್ಮಾನ ಮತಯಂತ್ರಗಳ ವಾಹನವನ್ನ ಜೆ.ಎಸ್.ಎಸ್.ಕಲಾ ಮತ್ತು ವಿಜ್ಞಾನ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಇರಿಸುವ ಕರ್ತವ್ಯದಲ್ಲಿ ಲೋಪವೆಸಗಿರುವ ಆರೋಪದ ಹಿನ್ನಲೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.ಕಾಲೇಜಿನ ಆಡಳಿತಮಂಡಳಿ ಜೊತೆ ವ್ಯವಹರಿಸಿ ಮುಖ್ಯದ್ವಾರ ತೆರೆಸುವ ವ್ಯವಸ್ಥೆ ಮಾಡಿಲ್ಲ ಈ ಕಾರಣ ವಿದ್ಯುನ್ಮಾನ ಮತಯಂತ್ರಗಳಿದ್ದ ವಾಹನ ಸುಮಾರು ಅರ್ಧಗಂಟೆ ಕಾಲ ರಸ್ತೆಯಲ್ಲೇ ನಿಂತಿದೆ.ಅಲ್ಲದೆ ವಿದ್ಯುನ್ಮಾನ ಮತಯಂತ್ರಗಳನ್ನ ಸ್ಟ್ರಾಂಗ್ ರೂಂ ನಲ್ಲಿ ಶೇಖರಿಸಿಡಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದಿಲ್ಲ,ಸರಿಯಾದ ಸಮಯದಲ್ಲಿ ಮರದ ಬಾಗಿಲು ತೆರೆಸಲು ಕಾರ್ಪೆಂಟರ್ ಕರೆಸುವಲ್ಲೂ ವ್ಯವಸ್ಥೆ ಮಾಡಿಲ್ಲ,ವಿದ್ಯುನ್ಮಾನ ಮತಯಂತ್ರಗಳನ್ನ ಸಾಗಿಸುವಾಗಲೂ ಖುದ್ದು ಹಾಜರಿರುವುದಿಲ್ಲ.ಈ ಎಲ್ಲಾ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ರವರು ರಾಜೀವ್ ನಾಥ್ ರನ್ನ ಅಮಾನತ್ತಿನಲ್ಲಿಟ್ಟು ಇಲಾಖಾ ವಿಚಾರಣೆಗೆ ಆದೇಶಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *