ಚುನಾವಣಾ ಕರ್ತವ್ಯದಲ್ಲಿ ಲೋಪ…ಪಾಲಿಕೆ ಎಇಇ ಅಮಾನತು…ವಿದ್ಯುನ್ಮಾನ ಮತ ಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಆರೋಪ…

ಚುನಾವಣಾ ಕರ್ತವ್ಯದಲ್ಲಿ ಲೋಪ…ಪಾಲಿಕೆ ಎಇಇ ಅಮಾನತು…ವಿದ್ಯುನ್ಮಾನ ಮತ ಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಆರೋಪ…

ಮೈಸೂರು,ಏ13,Tv10 ಕನ್ನಡ

ಲೋಕಸಭೆ ಚುನಾವಣಾ ಕರ್ತವ್ಯಕ್ಕೆ ಸಂಭಂಧಿಸಿದಂತೆ ವಿದ್ಯುನ್ಮಾನ ಮತಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಮೈಸೂರು ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲ ಅಭಿಯಂತರರು ಹಾಗೂ ಸ್ಟ್ರಾಂಗ್ ರೂಂ ಮತ್ತು ಮ್ಯಾನ್ ಪವರ್ ನೂಡಲ್ ಅಧಿಕಾರಿ ರಾಜೀವ್ ನಾಥ್ ರನ್ನ ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವಿದ್ಯನ್ಮಾನ ಮತಯಂತ್ರಗಳ ವಾಹನವನ್ನ ಜೆ.ಎಸ್.ಎಸ್.ಕಲಾ ಮತ್ತು ವಿಜ್ಞಾನ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಇರಿಸುವ ಕರ್ತವ್ಯದಲ್ಲಿ ಲೋಪವೆಸಗಿರುವ ಆರೋಪದ ಹಿನ್ನಲೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.ಕಾಲೇಜಿನ ಆಡಳಿತಮಂಡಳಿ ಜೊತೆ ವ್ಯವಹರಿಸಿ ಮುಖ್ಯದ್ವಾರ ತೆರೆಸುವ ವ್ಯವಸ್ಥೆ ಮಾಡಿಲ್ಲ ಈ ಕಾರಣ ವಿದ್ಯುನ್ಮಾನ ಮತಯಂತ್ರಗಳಿದ್ದ ವಾಹನ ಸುಮಾರು ಅರ್ಧಗಂಟೆ ಕಾಲ ರಸ್ತೆಯಲ್ಲೇ ನಿಂತಿದೆ.ಅಲ್ಲದೆ ವಿದ್ಯುನ್ಮಾನ ಮತಯಂತ್ರಗಳನ್ನ ಸ್ಟ್ರಾಂಗ್ ರೂಂ ನಲ್ಲಿ ಶೇಖರಿಸಿಡಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದಿಲ್ಲ,ಸರಿಯಾದ ಸಮಯದಲ್ಲಿ ಮರದ ಬಾಗಿಲು ತೆರೆಸಲು ಕಾರ್ಪೆಂಟರ್ ಕರೆಸುವಲ್ಲೂ ವ್ಯವಸ್ಥೆ ಮಾಡಿಲ್ಲ,ವಿದ್ಯುನ್ಮಾನ ಮತಯಂತ್ರಗಳನ್ನ ಸಾಗಿಸುವಾಗಲೂ ಖುದ್ದು ಹಾಜರಿರುವುದಿಲ್ಲ.ಈ ಎಲ್ಲಾ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ರವರು ರಾಜೀವ್ ನಾಥ್ ರನ್ನ ಅಮಾನತ್ತಿನಲ್ಲಿಟ್ಟು ಇಲಾಖಾ ವಿಚಾರಣೆಗೆ ಆದೇಶಿಸಿದ್ದಾರೆ…

Spread the love

Related post

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ… ಹುಣಸೂರು,ಅ29,Tv10 ಕನ್ನಡಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ…
SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಕ್ಯಾಪ್…ಸಿಎಂ,ಡಿಸಿಎಂ ರಿಂದ ಲಾಂಚ್…

SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ…

ಬೆಂಗಳೂರು,ಅ28,Tv10 ಕನ್ನಡ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಹಾಗೂ ಮುಖ್ಯಪೇದೆಗಳಿಗೆ ಹೊಸ ಕ್ಯಾಪ್ ಧರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.ನೂತನವಾಗಿ ಆಕರ್ಷಕವಾಗಿ ಸಿದ್ದಪಡಿಸಲಾದ PEAK CAP ಗೆ ಬೆಂಗಳೂರಿನ…
ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ… ಮೈಸೂರು,ಅ28,Tv10 ಕನ್ನಡ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಇಂದು ಅಪೂರ್ವ ಸ್ನೇಹಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಚಾಮುಂಡಿಪುರಂ ನಿವಾಸಿಗಳಿಗೆ ಹಾಗೂ ಸಾರ್ವಜನಿಕರಿಗೆ…

Leave a Reply

Your email address will not be published. Required fields are marked *