ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ಮೋದಿ…ಸಕಲ ಸಿದ್ದತೆ…ಭಾರಿ ಭದ್ರತೆ…

ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ಮೋದಿ…ಸಕಲ ಸಿದ್ದತೆ…ಭಾರಿ ಭದ್ರತೆ…

ಮೈಸೂರು,ಏ14,Tv10 ಕನ್ನಡ

ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.ಕಾರ್ಯಕರ್ತರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಲಿದ್ದಾರೆ.ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.ಮೋದಿ ಶಗಮನ ಹಿನ್ನಲೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಮೋದಿಯವರು ಭಾಷಣ ಮಾಡಲಿದ್ದಾರೆ.
ಮೋದಿ ಆಗಮಿಸುವ ರಸ್ತೆಗಳು ಹಾಗೂ ಮಹಾರಾಜ ಕಾಲೇಜು ಸುತ್ತ,ಮುತ್ತ ಭಾರೀ ಬಂದೋಬಸ್ತ್ ಮಾಡಲಾಗಿದೆ,ಇಂದು ಬೆಳಗಿನಿಂದಲೇ ಹಿರಿಯ ಪೊಲೀಸ್ ಅಧಿಕಾರಿಗಳು ಗಸ್ತು ತಿರುಗಿ ಭದ್ರತೆಯನ್ನು ಪರಿಶೀಲಿಸಿದ್ದಾರೆ.
ಮಧ್ಯಪ್ರದೇಶದಿಂದ ನೇರ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ, ಮಹಾರಾಜ ಕಾಲೇಜು ಮೈದಾನದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ವೇದಿಕೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹಾಗೂ ಅಭ್ಯರ್ಥಿಗಳಾದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್, ಎಚ್. ಡಿ ಕುಮಾರಸ್ವಾಮಿ, ಎಸ್ ಬಾಲರಾಜ್, ಪ್ರಜ್ವಲ್ ರೇವಣ್ಣ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಮಹಾರಾಜ ಕಾಲೇಜು ಮೈದಾನದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಬಿಜೆಪಿ ಜೆಡಿಎಸ್ ಸಮಾವೇಶ ನಡೆಯುತ್ತಿರುವುದರಿಂದ ಮೈತ್ರಿ ಪಕ್ಷಗಳ ಕಾರ್ಯಕರ್ತರು ಮುಖಂಡರ ಉತ್ಸಾಹ ಮುಗಿಲು ಮುಟ್ಟಿದೆ.
ಸುಮಾರು ಒಂದು ಗಂಟೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿಗಳು ನಂತರ ಮಂಗಳೂರಿಗೆ ತೆರಳಿ ರೋಡ್ ಷೋನಲ್ಲಿ ಪಾಲ್ಗೊಳ್ಳಲಿದ್ದಾರೆ…

Spread the love

Related post

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ…

ವಿದ್ಯತ್ ಸ್ಪರ್ಷ…ತಾಯಿಮಗ ಸಾವು…ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ದುರ್ಘಟನೆ… ಹುಣಸೂರು,ಅ29,Tv10 ಕನ್ನಡಬೆಳೆಗಳಿಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷಿಸಿ ತಾಯಿ ಮಗ ಸಾವನ್ನಪ್ಪಿದ ದುರಂತ ಘಟನೆ ಹುಣಸೂರು ತಾಲೂಕಿನ…
SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಕ್ಯಾಪ್…ಸಿಎಂ,ಡಿಸಿಎಂ ರಿಂದ ಲಾಂಚ್…

SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ…

ಬೆಂಗಳೂರು,ಅ28,Tv10 ಕನ್ನಡ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಹಾಗೂ ಮುಖ್ಯಪೇದೆಗಳಿಗೆ ಹೊಸ ಕ್ಯಾಪ್ ಧರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.ನೂತನವಾಗಿ ಆಕರ್ಷಕವಾಗಿ ಸಿದ್ದಪಡಿಸಲಾದ PEAK CAP ಗೆ ಬೆಂಗಳೂರಿನ…
ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ… ಮೈಸೂರು,ಅ28,Tv10 ಕನ್ನಡ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಇಂದು ಅಪೂರ್ವ ಸ್ನೇಹಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಚಾಮುಂಡಿಪುರಂ ನಿವಾಸಿಗಳಿಗೆ ಹಾಗೂ ಸಾರ್ವಜನಿಕರಿಗೆ…

Leave a Reply

Your email address will not be published. Required fields are marked *