ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ಮೋದಿ…ಸಕಲ ಸಿದ್ದತೆ…ಭಾರಿ ಭದ್ರತೆ…

ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ಮೋದಿ…ಸಕಲ ಸಿದ್ದತೆ…ಭಾರಿ ಭದ್ರತೆ…

ಮೈಸೂರು,ಏ14,Tv10 ಕನ್ನಡ

ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.ಕಾರ್ಯಕರ್ತರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಲಿದ್ದಾರೆ.ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.ಮೋದಿ ಶಗಮನ ಹಿನ್ನಲೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಮೋದಿಯವರು ಭಾಷಣ ಮಾಡಲಿದ್ದಾರೆ.
ಮೋದಿ ಆಗಮಿಸುವ ರಸ್ತೆಗಳು ಹಾಗೂ ಮಹಾರಾಜ ಕಾಲೇಜು ಸುತ್ತ,ಮುತ್ತ ಭಾರೀ ಬಂದೋಬಸ್ತ್ ಮಾಡಲಾಗಿದೆ,ಇಂದು ಬೆಳಗಿನಿಂದಲೇ ಹಿರಿಯ ಪೊಲೀಸ್ ಅಧಿಕಾರಿಗಳು ಗಸ್ತು ತಿರುಗಿ ಭದ್ರತೆಯನ್ನು ಪರಿಶೀಲಿಸಿದ್ದಾರೆ.
ಮಧ್ಯಪ್ರದೇಶದಿಂದ ನೇರ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ, ಮಹಾರಾಜ ಕಾಲೇಜು ಮೈದಾನದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ವೇದಿಕೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹಾಗೂ ಅಭ್ಯರ್ಥಿಗಳಾದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್, ಎಚ್. ಡಿ ಕುಮಾರಸ್ವಾಮಿ, ಎಸ್ ಬಾಲರಾಜ್, ಪ್ರಜ್ವಲ್ ರೇವಣ್ಣ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಮಹಾರಾಜ ಕಾಲೇಜು ಮೈದಾನದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಬಿಜೆಪಿ ಜೆಡಿಎಸ್ ಸಮಾವೇಶ ನಡೆಯುತ್ತಿರುವುದರಿಂದ ಮೈತ್ರಿ ಪಕ್ಷಗಳ ಕಾರ್ಯಕರ್ತರು ಮುಖಂಡರ ಉತ್ಸಾಹ ಮುಗಿಲು ಮುಟ್ಟಿದೆ.
ಸುಮಾರು ಒಂದು ಗಂಟೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿಗಳು ನಂತರ ಮಂಗಳೂರಿಗೆ ತೆರಳಿ ರೋಡ್ ಷೋನಲ್ಲಿ ಪಾಲ್ಗೊಳ್ಳಲಿದ್ದಾರೆ…

Spread the love

Related post

ವಿ.ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆ…ನಾಳೆ ಸರ್ಕಾರಿ ಮೈಸೂರುಕಚೇರಿ,ಶಾಸಂಸದ ವಿ. ಶ್ರೀನಿವಾಸ ಲಾ ಕಾಲೇಜುಗಳಿಗೆ ರಜೆ ಘೋಷಣೆ…

ವಿ.ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆ…ನಾಳೆ ಸರ್ಕಾರಿ ಮೈಸೂರುಕಚೇರಿ,ಶಾಸಂಸದ ವಿ. ಶ್ರೀನಿವಾಸ ಲಾ…

ಮೈಸೂರು,ಏ29,Tv10 ಕನ್ನಡ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆನಾಳೆ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಪ್ರಸಾದ್ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ…
ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್…

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್…

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್… ಮೈಸೂರು,ಏ29,Tv10 ಕನ್ನಡ ಹಳೇ ಧ್ವೇಷ ಹಿನ್ನಲೆ ಯುವಕನಿಗೆ ಚಾಕು ಇರಿದು ಹತ್ಯೆಗೈದ ಘಟನೆ ಮೈಸೂರಿನ ಅಗ್ರಹಾರದ 101…
ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ… ಮೈಸೂರು,ಏ29,Tv10 ಕನ್ನಡ ಪ್ರಯಾಣಿಕರೊಬ್ಬರು ಕಳೆದುಕೊಂಡ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್ ನ್ನ ಕೆಲವೇ ಗಂಟೆಗಳಲ್ಲಿ…

Leave a Reply

Your email address will not be published. Required fields are marked *