ಅನೈತಿಕ ಸಂಭಂಧ ಶಂಕೆ…ಚಾಕುವಿನಿಂದ ಇರಿದು ಪತ್ನಿ ಕೊಲೆಗೆ ಯತ್ನಿಸಿದ ಪತಿ…

ಅನೈತಿಕ ಸಂಭಂಧ ಶಂಕೆ…ಚಾಕುವಿನಿಂದ ಇರಿದು ಪತ್ನಿ ಕೊಲೆಗೆ ಯತ್ನಿಸಿದ ಪತಿ…

ಮೈಸೂರು,ಏ14,Tv10 ಕನ್ನಡ

ಪರಪುರುಷನೊಂದಿಗೆ ಅನೈತಿಕ ಸಂಭಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ದಿನನಿತ್ಯ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿರಾಯ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪತಿಯಿಂದ ಹಲ್ಲೆಗೊಳಗಾದ ಪತ್ನಿ ಸುಮಾ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದಾರೆ.ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಪತಿ ಕೃಷ್ಣ ತಲೆಮರೆಸಿಕೊಂಡಿದ್ದಾನೆ.
ಸುಮ ಹಾಗೂ ಕೃಷ್ಣ ಪ್ರೀತಿಸಿ ಮದುವೆ ಆಗಿದ್ದರು.ಸುಮ 2 ಮಕ್ಕಳ ತಾಯಿ ಆಗಿದ್ದರು.ಕುಡಿತದ ಚಟ ಅಂಟಿಸಿಕೊಂಡ ಕೃಷ್ಣ ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ.ಇದೇ ವಿಚಾರದಲ್ಲಿ ಕಳೆದ ವರ್ಷ ಗಲಾಟೆ ಮಾಡಿ ಪತ್ನಿ ಮೇಲೆ ಮೊಚ್ಚಿನಿಂದ ಹಲ್ಲೆ ನಡೆಸಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಕೃಷ್ಣ ಮತ್ತೆ ಕಿರುಕುಳ ನೀಡುತ್ತಿದ್ದ.ಪತಿಯ ವರ್ತನೆಗೆ ಬೇಸತ್ತ ಸುಮಾ ತವರು ಮನೆ ಸೇರಿದ್ದರು.ಆಗಾಗ ಬಂದು ತನ್ನ ಜೊತೆ ಮನೆಗೆ ಬರುವಂತೆ ಪೀಡಿಸುತ್ತಿದ್ದ.ಜೀವನೋಪಾಯಕ್ಕಾಗಿ ಸುಮಾ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.ಕೆಲಸದಿಂದ ಮನೆಗೆ ಹಿಂದಿರುಗುತ್ತಿದ್ದ ಸುಮಾರನ್ನ ಕರೆದೊಯ್ದು ಚಾಕುವಿನಿಂದ ಕುತ್ತಿಗೆ ಕೊಯ್ದು ಗಾಯಗೊಳಿಸಿ ಕೊಲೆಗೆ ಯತ್ನಿಸಿದ್ದಾನೆ.ತೀವ್ರ ಗಾಯಗೊಂಡ ಸುಮಾರನ್ನ ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕೃಷ್ಣನಿಂದ ಮಗಳ ರಕ್ಷಣೆ ಬೇಕೆಂದು ಸುಮಾ ತಾಯಿ ಸುನಂದ ಮನವಿ ಮಾಡಿದ್ದು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *