ಯದುವೀರ್ ದಂಪತಿಯಿಂದ ಮಹಾರಾಜ ಕಾಲೇಜು ಮೈದಾನ ಸ್ವಚ್ಛತೆ…ಸಾಥ್ ನೀಡಿದ ಅಭಿಮಾನಿಗಳು…

ಯದುವೀರ್ ದಂಪತಿಯಿಂದ ಮಹಾರಾಜ ಕಾಲೇಜು ಮೈದಾನ ಸ್ವಚ್ಛತೆ…ಸಾಥ್ ನೀಡಿದ ಅಭಿಮಾನಿಗಳು…

ಮೈಸೂರು,ಏ15,Tv10 ಕನ್ನಡ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಖಾ ಒಡೆಯರ್ ಅವರೊಂದಿಗೆ ಸೇರಿ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಸ್ವಚ್ಛಗೊಳಿಸಲು ಮುಂದಾದರು.ನಿನ್ನೆ ನಡೆದ ಮೋದಿ ರಾಲಿ ನಂತರ ಮೈದಾನದಲ್ಲಿ ತುಂಬಿದ ಜನಸಾಗರದಿಂದ ಕಸಮಯವಾಗಿತ್ತು.ಅಲ್ಲಲ್ಲಿ ಹರಡಿದ್ದ ಕಸವನ್ನು ಯದುವೀರ್ ತಮ್ಮ ಅಭಿಮಾನಿಗಳು ಹಾಗೂ ನಗರಪಾಲಿಕೆ ಸಿಬ್ಬಂದಿಗಳ ಜೊತೆ ಸೇರಿ ಸ್ವಚ್ಚಗೊಳಿಸಿದರು.
ಇಂದು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದ ಕಾರ್ಮಿಕರಿಗೆ ಯದುವೀರ್ ಅವರು ಕೃತಜ್ಞತೆ ಸಲ್ಲಿಸಿದರು.ಹಾಗೆ ಕಸವನ್ನು ಆದಷ್ಟು ಬೇಗ ಮೈದಾನದಿಂದ ತೆರವುಗೊಳಿಸುವಂತೆ ಮನವಿ ಮಾಡಿದರು.
ತ್ರಿಶಿಖಾ ಅವರೊಂದಿಗೆ ಯದುವೀರ್ ಕೂಡ ತ್ಯಾಜ್ಯವನ್ನು ಆರಿಸಿದ ಬೆಳವಣಿಗೆ ಎಲ್ಲರ ಗಮನ ಸೆಳೆಯಿತು.
ಕೆಲವು ಸ್ವಯಂಸೇವಕರು ಕೂಡ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ‘ನಗರವು ಯಾವಾಗಲೂ ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಮೋದಿಜಿಯವರ ಕಾರ್ಯಕ್ರಮದ ನಂತರ ಮೈದಾನವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನನ್ನ ಕರ್ತವ್ಯವಾಗಿದೆ ಮತ್ತು ನಗರವನ್ನು ಸ್ವಚ್ಛವಾಗಿಡುವುದು ನಮ್ಮ ಪ್ರಧಾನಮಂತ್ರಿ ಉಪಕ್ರಮದ ಸ್ವಚ್ ಭಾರತ್ ಅಭಿಯಾನಕ್ಕೆ ಅನುಗುಣವಾಗಿದೆ.
ಮೈಸೂರು ನಗರದ ಸ್ವಚ್ಟತೆಗೆ ನನ್ನ ಮೊದಲ ಆದ್ಯತೆ’ ಇದು ಇನ್ನೂ ಮುಂದೆಯೂ ಮುಂದುವರೆಯುತ್ತದೆ ಎಂದರು…

Spread the love

Related post

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…
ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…

Leave a Reply

Your email address will not be published. Required fields are marked *